ಕಾಣದ ಕೈಗಳಿಂದ ಅವಕಾಶ ವಂಚಿತನಾಗಿದ್ದೇನೆ : ವಿನಯ್
ಹೊನ್ನಾಳಿ : ಕಾಣದ ಕೈಗಳಿಂದ ಟಿಕೆಟ್ ಪಡೆಯುವಲ್ಲಿ ವಂಚಿತನಾಗಿದ್ದು, ಅವಕಾಶಗಳನ್ನು ನಾವೇ ಸೃಷ್ಠಿಸಿಕೊಳ್ಳಬೇಕಾಗಿದೆ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಹಿಂದ ಯುವ ನಾಯಕ ಜಿ.ಬಿ. ವಿನಯ್ ಕುಮಾರ್ ಹೇಳಿದರು.
ಹೊನ್ನಾಳಿ : ಕಾಣದ ಕೈಗಳಿಂದ ಟಿಕೆಟ್ ಪಡೆಯುವಲ್ಲಿ ವಂಚಿತನಾಗಿದ್ದು, ಅವಕಾಶಗಳನ್ನು ನಾವೇ ಸೃಷ್ಠಿಸಿಕೊಳ್ಳಬೇಕಾಗಿದೆ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಹಿಂದ ಯುವ ನಾಯಕ ಜಿ.ಬಿ. ವಿನಯ್ ಕುಮಾರ್ ಹೇಳಿದರು.
ಹೊನ್ನಾಳಿ : ತಾಲ್ಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿ ಕಳೆದ 35 ರಿಂದ 40 ವರ್ಷ ವಾಸವಾಗಿರುವ ಶಿಳ್ಳೇಕ್ಯಾತ ಜನಾಂಗದವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೂಕು ಅಧ್ಯಕ್ಷ ಕುರುವ ಮಂಜುನಾಥ ಆಗ್ರಹಿಸಿದ್ದಾರೆ.
ಹರಿಹರ : ತಾಲ್ಲೂಕಿನಲ್ಲಿ ಅಧಿಕ ಲೀಡ್ ದೊರೆಯಲಿದ್ದು, ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಮಾಜಿ ಶಾಸಕ ಎಸ್. ರಾಮಪ್ಪ ಹೇಳಿದರು.
ಹೊನ್ನಾಳಿ : ಗ್ರಾಮೀಣ ಪ್ರದೇಶಗಳಲ್ಲಿ ಜಾತ್ರೆ, ಹಬ್ಬ-ಹರಿದಿನಗಳನ್ನು ಆಚರಿಸುತ್ತಾ ಬಂದಿರುವುದು ಗ್ರಾಮಗಳಲ್ಲಿನ ಒಗ್ಗಟ್ಟನ್ನು ಪ್ರದರ್ಶಿಸುತ್ತದೆ ಎಂದು ಸಂಸದ ಜಿ.ಎಂ. ಸಿದ್ದೇಶ್ ತಿಳಿಸಿದರು.
ಹೊನ್ನಾಳಿ : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಗೂ ಭಕ್ತರಿಗೆ ಅನ್ನ, ಅಕ್ಷರ ಹಾಗೂ ನ್ಯಾಯದಾನಗಳಂತಹ ತ್ರಿವಿಧ ದಾಸೋಹ ನೀಡುತ್ತಾ ಬಂದಿರುವ ಹಿರೇಕಲ್ಮಠದ ಲಿಂಗೈಕ ಗುರುಗಳ ಪುಣ್ಯಾರಾಧನೆ ಪ್ರಯುಕ್ತ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸತಿ ಪತಿಗಳಾಗುತ್ತಿರುವವರು ನಿಜಕ್ಕೂ ಪುಣ್ಯವಂತರು
ಹೊನ್ನಾಳಿ : ಲೋಕಸಭಾ ಚುನಾವಣೆ ಪ್ರಯುಕ್ತ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಕಾರಣ ನಾಡಿದ್ದು ದಿನಾಂಕ 23ರ ಶನಿವಾರ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಸರಳ ಹಾಗೂ ಸಂಕ್ಷಿಪ್ತವಾಗಿ ಹಮ್ಮಿಕೊಳ್ಳಲಾಗಿದೆ
ಹೊನ್ನಾಳಿ : ತಾಲ್ಲೂಕಿನ ಹೊಳೆಹರಳಹಳ್ಳಿ ಕ್ರಾಸ್ನ ಚೆಕ್ ಪೋಸ್ಟ್ ಬಳಿ ಮಧ್ಯಾಹ್ನ ಎಸ್.ಎಸ್.ಟಿ. ತಂಡದವರು ಖಾಸಗಿ ಬಸ್ ತಪಾಸಣೆ ಮಾಡಿದ ಸಮಯದಲ್ಲಿ ಅಬ್ದುಲ್ ಖಲೀಲ್ ಎಂಬಾತನ ಬ್ಯಾಗಿನಲ್ಲಿ ಯಾವುದೇ ದಾಖಲೆಗಳಿಲ್ಲದ 3,98,000 ರೂ. ಹಣವನ್ನು ವಶಕ್ಕೆ ಪಡೆದು ಖಜಾನಾಧಿಕಾರಿಗಳ ಸುಪರ್ದಿಗೆ ಒಪ್ಪಿಸಲಾಗಿದೆ.
ಹೊನ್ನಾಳಿ : ಕಳೆದ 25 ವರ್ಷಗಳ ಹಿಂದೆ ಟೈಲರ್ ಕೆಲಸ ಮಾಡುವ ಸ್ತ್ರೀ-ಪುರುಷರ ಜೀವನ ಭದ್ರತೆಗಾಗಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇ ಷನ್ ಎಂದು ರಾಜ್ಯಮಟ್ಟದ ಸಂಘಟನೆ ರಚನೆಗೊಂ ಡಿದ್ದು, ನಮ್ಮ ಜೀವನ ಸುಧಾರಣೆಗಾಗಿ ಸರ್ಕಾರ ಟೈಲರ್ ಕ್ಷೇಮನಿಧಿ ಮಂಡಳಿ ರಚಿಸಬೇಕಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಿ.ಎ. ನಾರಾಯಣ್ ಹೇಳಿದರು.
ಹೊನ್ನಾಳಿ : ಪಡಿತರ ವಿತರಕರಿಗೆ ನಮ್ಮ ಸರ್ಕಾರ ಕಮೀಷನ್ ಹಣ ಹೆಚ್ಚು ಮಾಡಿದ್ದು, ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಶಾಸಕ ಡಿ.ಜಿ.ಶಾಂತನಗೌಡ ಭರವಸೆ ನೀಡಿದರು.
ಹೊನ್ನಾಳಿ : ವಿಪಕ್ಷ ನಾಯಕ ಆರ್.ಅಶೋಕ್, ಜಿಲ್ಲಾ ಉಸ್ತುವಾರಿಗಳು ಮತ್ತು ಸಮಾಜದ ಮುಖಂಡರಾದ ಭೈರತಿ ಬಸವರಾಜ್ ಮತ್ತಿತರೆ ಪ್ರಮುಖರು ಈ ಹಿಂದೆ ಪಕ್ಷಕ್ಕಾಗಿ ದುಡಿದಿದ್ದೀರಿ ಮತ್ತೆ ತಾವು ಪಕ್ಷಕ್ಕೆ ಮರಳಬೇಕೆಂದು ಕರೆ ನೀಡಿದ್ದರ ಹಿನ್ನೆಲೆಯಲ್ಲಿ ಶುಕ್ರವಾರ ದಾವಣಗೆರೆ ಕಾರ್ಯಕ್ರಮದಲ್ಲಿ ಬಿಜೆಪಿಗೆ ಮರಳಿದ್ದಾಗಿ ಜಿ.ಪಂ. ಮಾಜಿ ಸದಸ್ಯ ಎಂ.ಆರ್.ಮಹೇಶ್ ತಿಳಿಸಿದರು.
ಹೊನ್ನಾಳಿ : ರಾಜ್ಯ ಸರ್ಕಾರವು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ವ್ಯಾಪಾರ ವಹಿವಾಟು ಚುರುಕುಗೊಳಿಸಿ, ಸಮಿತಿಗಳಿಗೆ ಮತ್ತೆ ಜೀವಕಳೆ ತರುವ ಕಾರ್ಯ ನಡೆದಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಹೊನ್ನಾಳಿ : ನ್ಯಾಮತಿ ತಾಲ್ಲೂಕಿನ ಸವಳಂಗ ಕಾಯಕ ಕೆರೆ (ಹೊಸಕೆರೆ) ಯ ಅಚ್ಚುಕಟ್ಟು ವ್ಯಾಪ್ತಿಯ ಹಳ್ಳಿಗಳ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿಂಗಳಲ್ಲಿ 10 ದಿನಗಳು ಕಾಲ 30 ಎಮ್ಸಿಎಫ್ಟಿ ನೀರು ಬಿಡಬೇಕೆಂದು ತೀರ್ಮಾನ ಕೈಕೊಳ್ಳಲಾಯಿತು.