
ಎರಡು ಶಾಶ್ವತ ನೀರಾವರಿ ಯೋಜನೆ ಪೂರ್ಣಗೊಳಿಸುವೆ
ಜಗಳೂರು : ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ ಸಾಕಾರಗೊಂಡಿರುವ ಎರಡು ಶಾಶ್ವತ ನೀರಾವರಿ ಯೋಜನೆಗಳ ಕಾಮಗಾರಿ ಪೂರ್ಣಗೊಳಿಸುವೆ. ನಾನು ಮಾತನಾಡುವ ಶಾಸಕನಲ್ಲ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಸೇವಕ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಜಗಳೂರು : ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ ಸಾಕಾರಗೊಂಡಿರುವ ಎರಡು ಶಾಶ್ವತ ನೀರಾವರಿ ಯೋಜನೆಗಳ ಕಾಮಗಾರಿ ಪೂರ್ಣಗೊಳಿಸುವೆ. ನಾನು ಮಾತನಾಡುವ ಶಾಸಕನಲ್ಲ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಸೇವಕ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಜಗಳೂರು : ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಅಧಿಕಾರಿಗಳು ಸೋಮಾರಿತನ ಬಿಟ್ಟು ಪ್ರಾಮಾಣಿಕತೆ ಯಿಂದ ಕೆಲಸ ನಿರ್ವಹಿಸಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಿ ಎಂದು ನೂತನ ಶಾಸಕ ಬಿ. ದೇವೇಂದ್ರಪ್ಪ ಕೆಡಿಪಿ ಸಭೆಯಲ್ಲಿ ಖಡಕ್ ಸೂಚನೆ ನೀಡಿದರು.
ಜಗಳೂರು, ಜೂ. 3- ತಾಲ್ಲೂಕಿನಲ್ಲಿ ಕೆರೆ ಗಳನ್ನು ಒತ್ತುವರಿ ಮಾಡಿ ಮನೆ, ಕಟ್ಟಡಗಳನ್ನು ನಿರ್ಮಿಸಿ ಕೊಂಡಿರುವುದನ್ನು ತೆರವುಗೊಳಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅಧಿಕಾರಿಗಳಿಗೆ ಸೂಚಿಸಿದರು.
ಜಗಳೂರು : ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಬೆಂಬಲ ಬೆಲೆಗೆ ರಾಜ್ಯ ಸುಗ್ರೀ ವಾಜ್ಞೆ ಹೊರಡಿಸಿ ರಾಜ್ಯಮಟ್ಟದಲ್ಲಿ ಎಂ.ಎಸ್.ಪಿ.ಗೆ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
ಜಗಳೂರು : ಯಾರೊಬ್ಬರಿಗೂ ತಾರತಮ್ಯವಿಲ್ಲದೆ ಸಮಸ್ತ ಮತದಾರರಿಗೆ ನ್ಯಾಯ ಒದಗಿಸುತ್ತಾ ಕ್ಷೇತ್ರದಲ್ಲಿ ಕಸಗುಡಿಸಿ ಅಭಿವೃದ್ದಿ ಘಂಟೆ ಭಾರಿಸುವೆ. ಕ್ಷೇತ್ರವನ್ನು ರಾಮರಾಜ್ಯವನ್ನಾಗಿಸುವ ಪರಿಕಲ್ಪನೆ ನನ್ನದು ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಜಗಳೂರು : ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸಲು ನಾನು ಶ್ರಮಿಸಿದೆ, ಆದರೆ `ಗೆದ್ದಲುಗಳು ಕಟ್ಟಿದ ಹುತ್ತದಲ್ಲಿ ಹಾವು ಬಂದು ಸೇರಿದಂತಾಯಿತು’ ಎಂದು ಪರಾಜಿತ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಎಚ್.ಪಿ.ರಾಜೇಶ್ ಭಾವುಕರಾಗಿ ಕಣ್ಣೀರು ಹಾಕಿದರು.
ಜಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ಸಂಭ್ರಮಿಸಿದರು.
ಜಗಳೂರು : ಪಟ್ಟಣದಲ್ಲಿ ಸಾರ್ವಜನಿಕರು ತ್ಯಾಜ್ಯ ದೇಣಿಗೆದಾರರಾಗಿ `ನನ್ನ ಲೈಫ್, ನನ್ನ ಸ್ವಚ್ಛ ನಗರ’ ಅಭಿಯಾನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಮನವಿ ಮಾಡಿದರು.
ಜಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕೇವಲ 874 ಅಲ್ಪ ಮತಗಳ ಅಂತರದಲ್ಲಿ ಬಿಜೆಪಿ ಸೋಲು ಅನುಭವಿಸಿದ್ದು, ಮತದಾರರ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ.ಮಹೇಶ್ ತಿಳಿಸಿದರು.
ಜಗಳೂರು : ನಾನು ಅಂಕಿ-ಅಂಶಗ ಳಿಂದ ಸೋತಿರಬಹುದು. ಆದರೆ ಜನರ ಹೃದಯದಲ್ಲಿ ಗೆದ್ದಿದ್ದೇನೆ ಎಂದು ಪರಾಜಿತ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಎಚ್.ಪಿ.ರಾಜೇಶ್ ಹೇಳಿದರು.
ಜಗಳೂರು : ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಕ್ಷೇತ್ರದ ನೂತನವಾಗಿ ಶಾಸಕರಾಗಿ ಆಯ್ಕೆಯಾಗಿರುವ ಬಿ. ದೇವೇಂದ್ರಪ್ಪ ತಿಳಿಸಿದರು.
ಜಗಳೂರು : ಪ್ರಧಾನಿ ಮೋದಿ ಅವರ 2 ಕೋಟಿ ಉದ್ಯೋಗ ಸೃಷ್ಠಿ, ಜನ್ ಧನ್ ಖಾತೆಗೆ 15 ಲಕ್ಷ ಹಣ ಜಮಾ ಎಲ್ಲವೂ ಹುಸಿ ಭರವಸೆಗಳಾಗಿವೆ.