ಜಾತ್ರೆಗಳು ಕುಲ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆಯ ಸೆಲೆಗಳು
ಜಗಳೂರು : ಬಯಲು ಸೀಮೆಯಲ್ಲಿನ ಜಾತ್ರೆಗಳು ಕುಲ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆಯ ಸೆಲೆಗಳಾಗಿವೆ ಎಂದು ಸಂಸ್ಕೃತಿ ಚಿಂತಕ, ವಿಮರ್ಶಕ, ಅಂಕಣಕಾರ ಬಂಜಗೆರೆ ಜಯಪ್ರಕಾಶ್ ವ್ಯಾಖ್ಯಾನಿಸಿದರು.
ಜಗಳೂರು : ಬಯಲು ಸೀಮೆಯಲ್ಲಿನ ಜಾತ್ರೆಗಳು ಕುಲ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆಯ ಸೆಲೆಗಳಾಗಿವೆ ಎಂದು ಸಂಸ್ಕೃತಿ ಚಿಂತಕ, ವಿಮರ್ಶಕ, ಅಂಕಣಕಾರ ಬಂಜಗೆರೆ ಜಯಪ್ರಕಾಶ್ ವ್ಯಾಖ್ಯಾನಿಸಿದರು.
ಜಗಳೂರು : ತಾಲ್ಲೂಕಿನ ಪ್ರಸಿದ್ಧ ಕೊಡದಗುಡ್ಡ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಇದೇ ದಿನಾಂಕ 14ರಂದು ನೂತನವಾಗಿ ನಿರ್ಮಿಸಿರುವ ವಸತಿ ಗೃಹಗಳ ಉದ್ಘಾಟನೆ, ಕರಿಗಲ್ಲು ಸ್ಥಾಪನೆ, ಕಲ್ಯಾಣ ಮಂಟಪಕ್ಕೆ ಶಂಕು ಸ್ಥಾಪನೆ ಹಾಗೂ ಅಡ್ಡ ಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮಸಭೆ ನಡೆಯಲಿದೆ
ಜಗಳೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರಿದ್ದು ನನಗೇ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಪಕ್ಷದ ಲೋಕಸಭಾ ಟಿಕೆಟ್ ಆಕಾಂಕ್ಷಿ ಜಿ.ಬಿ. ವಿನಯ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಗಳೂರು : ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕನ್ನಡ ಚಲನಚಿತ್ರ ನಟ ಕೆ. ಶಿವರಾಮ್ ನಿಧನಕ್ಕೆ ಮೇಣದ ಬತ್ತಿ ಹಚ್ಚಿ ಸಂತಾಪ ಸೂಚಿಸಲಾಯಿತು.
ಜಗಳೂರು : `ತ್ರಿಪದಿ ಬ್ರಹ್ಮ’ ಎಂದು ಖ್ಯಾತಿ ಪಡೆದು, ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ ಸರ್ವಜ್ಞ ಕವಿಯ ಜಯಂತ್ಯುತ್ಸವವನ್ನು ತಾಲ್ಲೂಕು ಆಡಳಿತದಿಂದ ತಾಲ್ಲೂಕು ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಜಗಳೂರು : ಪಟ್ಟಣದ ಈಶ್ವರ ದೇವಸ್ಥಾನದ ಮುಂಭಾಗದಲ್ಲಿ ಮುಖ್ಯಧಿಕಾರಿ ಲೋಕ್ಯಾ ನಾಯ್ಕ್ ಮತ್ತು ಪಟ್ಟಣ ಪಂಚಾಯಿತಿ ಸದಸ್ಯ ಮಹಮ್ಮದ್ ಆಲಿ ಮತ್ತು ಮಂಜಮ್ಮ ಇ-ಖಾತಾ ಆಂದೋಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಗಳೂರು : ಪಟ್ಟಣ ಪಂಚಾಯತಿ ಆಶ್ರಯದಲ್ಲಿ ಸಾರ್ವಜನಿಕರ ಮನೆ ಬಾಗಿಲಿಗೆ ಇ-ಆಸ್ತಿ ಸೇವೆ ಆಂದೋಲನ ಹಮ್ಮಿಕೊಂಡಿದ್ದು, ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಜಗಳೂರು : ತಾಲ್ಲೂಕು ಆಡಳಿತ, ವಿವಿಧ ಇಲಾಖೆಗಳ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಅಧಿಕಾರಿಗಳು, ವಿದ್ಯಾರ್ಥಿಗಳು, ಸಂಘಟನೆ ಮುಖಂಡರುಗಳು, ಇದೇ ದಿನಾಂಕ 20 ರಂದು ‘ಸಂವಿಧಾನ ಜಾಗೃತಿ ಜಾಥಾದ ರಥೋತ್ಸವ’ ಆಗಮಿಸುವ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿಯಾಗಿ ಅರಿವು ಮೂಡಿಸಲಾಯಿತು.
ಜಗಳೂರು : ತಾಲ್ಲೂಕಿನ ಅಣಬೂರು ಗ್ರಾಮದಲ್ಲಿ ಈಚೆಗೆ ಉಚಿತ ಕಣ್ಣಿನ ತಪಾಸಣೆಯನ್ನು ವಿಕಾಸ ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆ ಹಾಗೂ ದೃಷ್ಟಿ ಕಣ್ಣಿನ ಆಸ್ಪತ್ರೆ (ಚಿತ್ರದುರ್ಗ) ಇವರ ಸಂಯುಕ್ತಾಶ್ರಯದಲ್ಲಿ ನಡೆಸಲಾಯಿತು.
ಜಗಳೂರು : ಕಾರ್ಯಕರ್ತರ ಮತ್ತು ಮುಖಂಡರುಗಳ ಅಭಿಪ್ರಾಯ ಸಂಗ್ರಹಿಸಿ, ಮುಂದಿನ ರಾಜಕೀಯ ನಿರ್ಣಯ ಕೈಗೊಳ್ಳುವು ದಾಗಿ ಕಳೆದ ವಿಧಾನ ಸಭಾಚುನಾವಣೆಯಲ್ಲಿ ಪಕ್ಷೇ ತರರಾಗಿ ಸ್ಪರ್ಧಿಸಿ ಪರಾಜಿತರಾಗಿರುವ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ತಿಳಿಸಿದ್ದಾರೆ.
ಜಗಳೂರು : ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು, ಗುಣಮಟ್ಟದ ಕೆಲಸ ಮಾಡಬೇಕು ಎಂದು ಗುತ್ತಿಗೆದಾರರಿಗೆ ಶಾಸಕ ಬಿ.ದೇವೇಂದ್ರಪ್ಪ ಖಡಕ್ ಸೂಚನೆ ನೀಡಿದರು.
ಜಗಳೂರು : ಮೌಢ್ಯತೆಯ ಕಾರಣದಿಂದಾಗಿ ಬಾಲ್ಯ ವಿವಾಹ ಸಾಮಾಜಿಕ ಪಿಡುಗಾಗಿದ್ದು. ನಿರ್ಮೂಲನೆಗೆ ಜಾಗೃತಿ ಅಗತ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.