ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಪರ ಕಿಚ್ಚನ ರೋಡ್ ಶೋ

ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಪರ ಕಿಚ್ಚನ ರೋಡ್ ಶೋ

ದಾವಣಗೆರೆ, ಏ.27- ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಜಿ. ಅಜಯ್ ಕುಮಾರ್ ಅವರ ಪರ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಿನ್ನೆ ರೋಡ್ ಶೋ ಮೂಲಕ ಮತ ಪ್ರಚಾರ ನಡೆಸಿದರು.

ಹದಡಿ ಗ್ರಾಮದಲ್ಲಿ ಅಜಯ್ ಕುಮಾರ್ ಅವರೊಂದಿಗೆ ಬಿರುಸಿನ ಮತ ಪ್ರಚಾರ ನಡೆಸಿದ  ಸುದೀಪ್, ಅಜಯ್ ಕುಮಾರ್ ಅವರನ್ನು ಬೆಂಬಲಿಸುವಂತೆ ಮತದಾರರ ಮನ ಸೆಳೆದರು. ಹದಡಿ ಮುಖ್ಯ ರಸ್ತೆಯಿಂದ ಪ್ರಾರಂಭವಾದ ರೋಡ್ ಶೋ ಕುರ್ಕಿ ಕ್ರಾಸ್‌ನಲ್ಲಿ ಸಮಾರೋಪಗೊಂಡಿತು. ಈ ವೇಳೆ ನೆರೆದಿದ್ದ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಕಿಚ್ಚ ಸುದೀಪ್, ತಾವು ಅಭಿನಯಿಸಿರುವ ಮದಕರಿ ಚಿತ್ರದ ಡೈಲಾಗ್ ಒಂದನ್ನು ಹೇಳಿ ರಂಜಿಸಿದರಲ್ಲದೇ,  ಅಜಯ್ ಕುಮಾರ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದು, ಅವರನ್ನು ಬೆಂಬಲಿಸಿ ಹರಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ರೋಡ್ ಶೋನಲ್ಲಿ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ, ಕೊಳೇನಹಳ್ಳಿ ಸತೀಶ್ ಸೇರಿದಂತೆ   ಇತರರು ಸಾಥ್ ನೀಡಿದ್ದರು.  

error: Content is protected !!