ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಪಿ.ಬಿ. ರಸ್ತೆಯ ಪಂಚ ದೇವಸ್ಥಾನಗಳ ಮಹಾಕ್ಷೇತ್ರದಲ್ಲಿ ಶ್ರೀ ಶನೇಶ್ವರ ಸ್ವಾಮಿ ಜಯಂತ್ಯೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಶ್ರೀ ಸ್ವಾಮಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ ಸೇರಿದಂತೆ, ವಿಶೇಷ ಅಲಂಕಾರ ನಡೆಯಿತು. ನಂತರ ತೊಟ್ಟಿಲೋತ್ಸವ ಕಾರ್ಯಕ್ರಮ, ನವಗ್ರಹ ಹೋಮ, ತೀರ್ಥ ಪ್ರಸಾದ ವಿನಿಯೋಗ ಜರುಗಿತು.
May 6, 2024