ಜವಾಹರ್ ಬಾಲ್ ಮಂಚ್‌ನಿಂದ ಪ್ರಾರ್ಥನೆ

ಜವಾಹರ್ ಬಾಲ್ ಮಂಚ್‌ನಿಂದ ಪ್ರಾರ್ಥನೆ

ದಾವಣಗೆರೆ, ಮೇ 19- ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಗೆಲುವು ಸಾಧಿಸಿ, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ   ನಗರದ ಜಿಲ್ಲಾ ಜವಾಹರ್ ಬಾಲ್ ಮಂಚ್ ಹಾಗೂ ಕಾರ್ಯಕರ್ತರಿಂದ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಹಾಗೂ ಖಡಕ್ ಷಾ ವಲಿ ದರ್ಗಾದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

 ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ, ನಗರದಲ್ಲಿ ನಡೆದ ಐತಿಹಾಸಿಕ ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಕಾರಣವಾಗಿದ್ದು, ಈ ನಿಟ್ಟಿನಲ್ಲಿ   ಮಧ್ಯ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಲು ಶ್ರಮವಹಿಸಿದ ಶಾಮನೂರು ಶಿವಶಂಕರಪ್ಪ ಅಥವಾ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಪ್ರಭಾವಿ ಖಾತೆಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ನೀಡಬೇಕೆಂದು  ಮನವಿ ಮಾಡಿದರು.

ಹಿರಿಯ ಮುಖಂಡ  ರಾಜು ಭಂಡಾರಿ, ಕಿಸಾನ್ ಕಾಂಗ್ರೆಸ್ ಮುಖಂಡರಾದ ಹಾಲೇಶ್, ಎಂ.ಮಂಜು ಸ್ವಾಮಿ ಕತ್ತಲಗೇರಿ, ಸುರೇಶ್ ಎಂ.ಜಾಧವ್, ಹರೀಶ್  ಹಾಲೇಶ್, ಶಿಲ್ಪ ಪರಶುರಾಮ್, ಪ್ರೇಮಾ,   ರಿಯಾಜು ದ್ದೀನ್, ಧನಂಜಯ್, ಮತ್ತಿತರರು ಭಾಗವಹಿಸಿದ್ದರು.

error: Content is protected !!