ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ದಾವಣಗೆರೆ, ಅ.7- ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ‌ ಪಂಚಾಯ್ತಿ, ಶಿಕ್ಷಣ ಇಲಾಖೆ ಸಹಯೋಗದಲ್ಲಿ, ದಾವಣಗೆರೆ ಜಿಲ್ಲೆಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ  ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ  ಹಮ್ಮಿಕೊಳ್ಳಲಾಗಿತ್ತು.

ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣ ಸ್ವಾಮಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.  ಡಿಡಿಪಿಐ ಜಿ. ಕೊಟ್ರೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶ್ರೀಮತಿ ಮಂಜುಳ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳು ಈ ವೇಳೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಡಿಪಿಐ ಕೊಟ್ರೇಶ್, ದಾವಣಗೆರೆ ಜಿಲ್ಲೆ ಮೊದಲಿನಿಂದಲೂ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದೆ. ಹಾಗೆಯೇ ಇಂದು ಸ್ಪರ್ಧಿಸುತ್ತಿರುವ ವಿದ್ಯಾರ್ಥಿಗಳೂ ಸಹ ಮುಂದಿನ ಹಂತಗಳಲ್ಲಿ ವಿಜಯ ಸಾಧಿಸಿ, ರಾಷ್ಟ್ರಮಟ್ಟದಲ್ಲಿ ಪಾಲ್ಗೊಳ್ಳುವಂತಾಗಲಿ ಎಂದು ಆಶಿಸಿದರು. 

ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ಮಕ್ಕಳು ಲಾಂಗ್ ಜಂಪ್,‌ ಹೈ ಜಂಪ್, ಹ್ಯಾಮರ್ ಥ್ರೋ, ಚಕ್ರ ಎಸೆತ, ಶಾಟ್ ಪುಟ್, ರನ್ನಿಂಗ್ಸ್, ಜಾವಲಿನ್, ಓಟದ ಸ್ಪರ್ಧೆಗಳಲ್ಲಿ ವಿವಿಧ ತಾಲ್ಲೂಕುಗಳಿಂದ ಐನೂರಕ್ಕೂ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

error: Content is protected !!