ಸಂಕಷ್ಟದಲ್ಲಿರುವ ಜನರ ಕೈ ಹಿಡಿಯುವುದು ಕಾಂಗ್ರೆಸ್ ಮಾತ್ರ

ಸಂಕಷ್ಟದಲ್ಲಿರುವ ಜನರ ಕೈ ಹಿಡಿಯುವುದು ಕಾಂಗ್ರೆಸ್ ಮಾತ್ರ

ಭರಮಸಾಗರದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ

ಭರಮಸಾಗರ, ಮಾ.1 – ಕೇಂದ್ರ ಮತ್ತು ರಾಜ್ಯದಲ್ಲಿ ಆಳ್ವಿಕೆ ನಡೆಸುತ್ತಿ ರುವ ಬಿಜೆಪಿ ಸರ್ಕಾರಗಳು ಸಂಪೂ ರ್ಣವಾಗಿ ಬರೀ ಸುಳ್ಳು ಹೇಳುವ ಮೂಲಕ ಜನರ ದಾರಿ ತಪ್ಪಿಸುತ್ತೀವೆ. ಆದರೆ, ಕಾಂಗ್ರೆಸ್‌ ಪಕ್ಷ ಮಾತ್ರ ಜನಪರವಾಗಿದ್ದು ಸಂಕಷ್ಟದಲ್ಲಿರುವ ಜನರ ಕೈ ಹಿಡಿಯುವ ಪಕ್ಷವಾಗಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಹೇಳಿದರು.

ಬುಧವಾರ ಭರಮಸಾಗರದ ದುರ್ಗಾಂಬಿಕ ದೇವಸ್ಥಾನ ಆವರಣದಲ್ಲಿ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ನಡೆದ ಕಾಂಗ್ರೆಸ್ ಪಕ್ಷದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷವು ಬೆಲೆ ಏರಿಕೆಯಿಂದ ಸಂಕ ಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ.2000, ಹಾಗೂ ಅನ್ನಭಾಗ್ಯ ಯೋಜನೆಯ ಮೂಲಕ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿ ಮೂರು ಐತಿಹಾಸಿಕ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ ಎಂದರು.

ಕಾಂಗ್ರೆಸ್ ಪಕ್ಷವು ಜಾತಿ ಭೇದವಿಲ್ಲದೇ ಅನ್ನಭಾಗ್ಯ ಕರುಣಿಸಿದ ಪಕ್ಷವಾಗಿದೆ. ಕಾಂಗ್ರೆಸ್ ವಿರುದ್ಧ ಇಲ್ಲ ಸಲ್ಲದ ಆರೋಪ ಹೊರಿಸುವ ಸುಳ್ಳುಗಳ ಸರಮಾಲೆಯನ್ನೇ ಹೊದಿಸಿಕೊಂಡು ಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಬಡ ಜನರಿಗೆ ಅನುಕೂಲಕರ ಯೋಜನೆ ಜಾರಿ ಮಾಡಿಲ್ಲ. ಇದೀಗ ಗ್ಯಾಸ್ ಸಿಲಿಂಡರ್ ಬೆಲೆ 1150 ರೂ., 1 ಕೆಜಿ ಅಕ್ಕಿಯ ಬೆಲೆ ರೂ.50 ಆಗಿದೆ. ಬೆಲೆ ಏರಿಕೆಗಳ ಮಧ್ಯೆ ಬಡ ಜನರು ಜೀವನ ಮಾಡುವುದು ಕಷ್ಟವಾಗಿದೆ ಎಂದು ಆರೋಪಿಸಿದರು‌.

ಕೆಪಿಸಿಸಿ ಸದಸ್ಯ, ಜಿ.ಪಂ ಮಾಜಿ ಉಪಾಧ್ಯಕ್ಷ ಎಚ್.ಎನ್.ತಿಪ್ಪೇಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸರ್ವ ಜನಾಂಗದವರು ಸಂತೃಪ್ತಿಯಿಂದ ಜೀವನ ನಡೆಸುತ್ತಿದ್ದರು. ಆದರೆ, ಈಗ ತುಂಬಾ ದುಬಾರಿ ಜೀವನ ನಡೆಸಬೇಕಾಗಿದೆ ಎಂದು ದೂರಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎಮ್ಮೆಹಟ್ಟಿ ಕೃಷ್ಣಮೂರ್ತಿ ಮಾತನಾಡಿದರು. ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಅಳಗವಾಡಿ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದುರ್ಗೇಶ್ ಪೂಜಾರ್, ತಾಂಡಾ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಅನಿಲ್ ಕುಮಾರ್, ಜಿಪಂ ಮಾಜಿ ಸದಸ್ಯರಾದ ನರಸಿಂಹರಾಜ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಮುಬಾರಕ್, ಗ್ರಾಪಂ ಅಧ್ಯಕ್ಷೆ ಮಂಜುಳಾ ಸೇರಿದಂತೆ ಕಾಂಗ್ರೆಸ್ ಮುಖಂಡರು, ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!