ದಾವಣಗೆರೆಯ ಶ್ರೀ ಜಗದ್ಗುರು ಮುರುಘರಾಜೇಂದ್ರ ಟ್ರಸ್ಟ್, ಶ್ರೀ ಶಿವಯೋಗಾಶ್ರಮದ ಮಾಜಿ ಕಾರ್ಯದರ್ಶಿಗಳು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಮಾಜಿ ನಿರ್ದೇಶಕರೂ, ದಿ ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಮಾಜಿ ಉಪಾಧ್ಯಕ್ಷರೂ ಮತ್ತು ನಿರ್ದೇಶಕರೂ ಆಗಿದ್ದ ಶ್ರೀ ಕಂಚಿಕೆರೆ ವಿರೂಪಾಕ್ಷಪ್ಪನವರು ದಿನಾಂಕ 23-12-2023ರ ಶನಿವಾರ ರಾತ್ರಿ 9 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 77 ವರ್ಷ ವಯಸ್ಸಾಗಿತ್ತು. ಮೃತರು ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಶ್ರೀ ಕಂಚಿಕೆರೆ ವಿರೂಪಾಕ್ಷಪ್ಪನವರ ಪಾರ್ಥಿವ ಶರೀರವನ್ನು ದಿನಾಂಕ 24-12-2023ರ ಭಾನುವಾರ ಬೆಳಿಗ್ಗೆ 10 ರಿಂದ 12ರ ವರೆಗೆ ಶ್ರೀ ಜಯದೇವ ಮುರುಘರಾಜೇಂದ್ರ ವೃತ್ತದಲ್ಲಿರುವ ಶ್ರೀ ಶಿವಯೋಗಾಶ್ರಮದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ನಂತರ ಮಧ್ಯಾಹ್ನ 1 ಗಂಟೆಗೆ ಶಾಮನೂರಿನ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು.
August 27, 2024