ದಾವಣಗೆರೆ ದಿನೇಶ್ ಬೀಡಿ ಮಾಲೀಕರಾದ ಅಲ್ಹಾಜ್ ಯು.ಎಂ. ಅಬ್ದುಲ್ ಸಾಬ್ ಅವರು ದಿನಾಂಕ 18.05.2021ರ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 69 ವರ್ಷ ವಯಸ್ಸಾಗಿತ್ತು. ಅಬ್ದುಲ್ ಸಾಬ್, ದಾವಣಗೆರೆ ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಯು.ಎಂ. ಮನ್ಸೂರ್ ಅಲಿ ಅವರ ತಂದೆ. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 19.05.2021ರ ಬುಧವಾರ ಮುಂಜಾನೆ 7.30 ಕ್ಕೆ ದಾವಣಗೆರೆ ನಗರದ ಪಿ.ಬಿ. ರಸ್ತೆಯಲ್ಲಿರುವ ಈದ್ಗಾ ಖಬರ್ಸ್ತಾನದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024