ಮಲೇಬೆನ್ನೂರಿನ ಮಾಜಿ ಛೇರ್ಮನ್, ಹರಿಹರ ತಾ.ಬೋರ್ಡ್ ಮಾಜಿ ಸದಸ್ಯರೂ, ಚಿತ್ರದುರ್ಗ ಜಿಲ್ಲಾ ಪರಿಷತ್ ಮಾಜಿ ಸದಸ್ಯರು, ದಾವಣಗೆರೆ ಜಿಲ್ಲಾ ಕುರುಬ ಸಮಾಜದ ಗೌರವಾಧ್ಯಕ್ಷರು, ಮಕ್ಕಳ ಕಲ್ಯಾಣ ರಾಜ್ಯ ಪ್ರಶಸ್ತಿ ಪುರಸ್ಕೃತರೂ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಆದ ಶ್ರೀಯುತ ಡಾ. ಕೆ.ಪಿ. ಸಿದ್ದಬಸಪ್ಪ ಅವರು, ದಿನಾಂಕ 14.09.2020ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 96 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15.09.2020ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಲೇಬೆನ್ನೂರಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
August 1, 2024