Category: ಹರಿಹರ

ಬತ್ತಿ ಬರಿದಾದ ಕೊಂಡಜ್ಜಿ ಕೆರೆ…

ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಪ್ರವಾಸಿ ತಾಣವಾಗಿರುವ ದೊಡ್ಡ ಕೆರೆ ನೀರಿಲ್ಲದೇ ಬತ್ತಿ ಬರಿದಾಗಿದ್ದು, ಜನ – ಜಾನುವಾರಗಳಿಗೆ, ಪ್ರಾಣಿ – ಪಕ್ಷಿಗಳಿಗೆ ಸಂಕಷ್ಟ ಎದುರಾಗಿದೆ. ತುಂಗಭದ್ರಾ ನದಿಯಿಂದ ಕೊಂಡಜ್ಜಿ ಕೆರೆಗೆ ನೀರು ತುಂಬಿಸುವ ಯೋಜನೆ ಜಾರಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸಂಭ್ರಮದ ಶ್ರೀ ಕಾಳಿಕಾದೇವಿ ರಥೋತ್ಸವ

ಹರಿಹರ :  ನಗರದಲ್ಲಿ ಶ್ರೀ ಕಾಳಿಕಾದೇವಿ  ರಥೋತ್ಸವ ಶ್ರದ್ಧಾ – ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು.  ಸಹಸ್ರಾ ರ್ಜುನ ವೃತ್ತದಲ್ಲಿರುವ ಕಾಳಿಕಾದೇವಿ ದೇವಸ್ಥಾನದಲ್ಲಿ ದೇವಿಗೆ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ನಡೆದು, ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಹರಳಹಳ್ಳಿಯಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ

ಹರಿಹರ : ನಗರದ ಹೊರವಲಯದ ಹರಳಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಮುಳ್ಳು ಗದ್ದಿಗೆ ಉತ್ಸವಕ್ಕೆ ಟ್ರ್ಯಾಕ್ಟರ್‌ನಲ್ಲಿ ಮುಳ್ಳು ತೆಗೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಟ್ರ್ಯಾಕ್ಟರ್ ಸ್ಟೇರಿಂಗ್ ಕಟ್ ಆಗಿದ್ದರಿಂದ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿ ಆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಹಲವು ಯುವಕರಿಗೆ ಗಾಯಗಳಾಗಿದೆ. 

ಬೂದಿಹಾಳ್ : ಸಂಭ್ರಮದ ರಥೋತ್ಸವ

ಮಲೇಬೆನ್ನೂರು : ಎರೇಬೂದಿಹಾಳ್ ಗ್ರಾಮದ ಶ್ರೀ ಬಸವೇಶ್ವರ ದೇವರ ರಥೋತ್ಸವವು ಗುರುವಾರ ಸಂಜೆ ಶ್ರೀ ಆಂಜನೇಯ ಸ್ವಾಮಿ, ಶ್ರೀ ಮಾರಿಕಾಂಭ, ಶ್ರೀ ದುರ್ಗಮ್ಮ ದೇವರುಗಳು ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. 

ಜಾಕ್‌ವೆಲ್‌ ಬಳಿ ನೀರಿಗೆ ಗುಂಡಿ ನಿರ್ಮಾಣ

ಹರಿಹರ : ಇಲ್ಲಿನ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ನಗರಕ್ಕೆ ನೀರು ಪೂರೈಸುವ ಜಾಕ್‌ವೆಲ್‌ ಬಳಿ ಸಮರ್ಪಕ ನೀರು ನಿಲ್ಲುವಂತೆ ನಗರಸಭೆ ಪೌರಾಯುಕ್ತ ಐಗೂರು ಬಸವರಾಜ್‌ ಮತ್ತು   ಜಲಸಿರಿ ಅಧಿ ಕಾರಿ ನವೀನ್‌ ಕುಮಾರ್‌ ಜೆಸಿಬಿಯಿಂದ ಗುಂಡಿ ತೆಗೆಸಿದರು.

ಕೆ ಎನ್ ಹಳ್ಳಿ : ಸಂಭ್ರಮದ ಉಚ್ಛಾಯ, ಸೀತಾರಾಮ ಕಲ್ಯಾಣ ಮಹೋತ್ಸವ

ಮಲೇಬೆನ್ನೂರು : ಸಮೀಪದ ಕೆ. ಎನ್. ಹಳ್ಳಿ ಗ್ರಾಮದಲ್ಲಿ ಶ್ರೀರಾಮನವಮಿ ಪ್ರಯುಕ್ತ ಸೀತಾರಾಮ ಕಲ್ಯಾಣ ಮಹೋತ್ಸವ ಮತ್ತು ಶ್ರೀ ಆಂಜನೇಯ ಸ್ವಾಮಿ ಉಚ್ಛಾಯ ರಥೋತ್ಸವ ಬುಧವಾರ ನಡೆದವು.

ಕೊಕ್ಕನೂರಿನಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ

ಮಲೇಬೆನ್ನೂರು : ಸುಕ್ಷೇತ್ರ ಕೊಕ್ಕನೂರು ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸ ವವು ರಾಮನವಮಿ ಅಂಗವಾಗಿ ಬುಧವಾರ ಮಧ್ಯಾಹ್ನ ಸಂಪ್ರದಾಯದಂತೆ ಜರುಗಿತು.

ಹೊಳೆಸಿರಿಗೆರೆ : ವಿಜೃಂಭಣೆಯ ರಥ

ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವವು ರಾಮ ನವಮಿ ಅಂಗವಾಗಿ ಬುಧವಾರ ಬೆಳಗ್ಗೆ ಗ್ರಾಮಸ್ಥರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಹಾಲಿವಾಣ : ಸಂಭ್ರಮದ ಉಚ್ಛಾಯ

ಮಲೇಬೆನ್ನೂರು : ಹಾಲಿವಾಣ ಗ್ರಾಮದಲ್ಲಿ ಶ್ರೀರಾಮ ನವಮಿ ಅಂಗವಾಗಿ ಶ್ರೀ ಆಂಜನೇಯ ಸ್ವಾಮಿಯ ಉಚ್ಛಾಯವು ಗ್ರಾಮಸ್ಥರ ಸಮ್ಮುಖದಲ್ಲಿ ಬುಧವಾರ ಅದ್ಧೂರಿಯಾಗಿ ಜರುಗಿತು. ಮಹಾಮಂಗಳಾರತಿ ಹಾಗೂ ಜಯಘೊಷಗಳೊಂದಿಗೆ   ಉಚ್ಛಾಯವು ರಥಬೀದಿಯಲ್ಲಿ ಸಾಗಿ ಬನ್ನಿಮಂಟಪ ತಲುಪಿ ಮಂಗಳಾರತಿ ಮಾಡಿಸಿಕೊಂಡು ನಂತರ ಸ್ವಸ್ಥಾನಕ್ಕೆ ಬಂದು ತಲುಪಿತು. 

ಕಾಂಗ್ರೆಸ್ ಅಭ್ಯರ್ಥಿಯಿಂದ ನಾಳೆ ನಾಮಪತ್ರ ಸಲ್ಲಿಕೆ: ಶಕ್ತಿ ಪ್ರದರ್ಶಿಸಲು ಹರಿಹರ ತಾ. ಕಾಂಗ್ರೆಸ್ ನಿರ್ಧಾರ

ಹರಿಹರ : ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್  ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ನಾಳೆ ಗುರುವಾರ ನಾಮಪತ್ರ ಸಲ್ಲಿಸಲಿದ್ದು, ಈ ಕಾರ್ಯಕ್ರಮದಲ್ಲಿ ಹರಿಹರ ತಾಲ್ಲೂಕಿನಿಂದ ಸಹಸ್ರ ಸಂಖ್ಯೆಯಲ್ಲಿ ಜನ ಸೇರಬೇಕು ಎಂದು ಮಾಜಿ ಶಾಸಕ ಎಸ್‌.ರಾಮಪ್ಪ ಹಾಗೂ ಪಕ್ಷದ ಮುಖಂಡ ನಂದಿಗಾವಿ ಶ್ರೀನಿವಾಸ್ ಜಂಟಿಯಾಗಿ ಹೇಳಿದರು.

ಹರಳಹಳ್ಳಿ : ನೂತನ ರಥಕ್ಕೆ ಕಳಸಾರೋಹಣ, ಇಂದು ರಥೋತ್ಸವ

ಮಲೇಬೆನ್ನೂರು : ಸಮೀಪದ ಹರಳಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ರಥಕ್ಕೆ ಮಂಗಳವಾರ ಬೆಳಗ್ಗೆ ಕಣ್ವಕುಪ್ಪೆ ಗವಿಮಠದ ಶ್ರೀ ಡಾ. ನಾಲ್ವಡಿ ಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಳಸಾರೋಹಣ ಸಂಭ್ರಮದಿಂದ ನಡೆಯಿತು. ರಾತ್ರಿ ಚಿಗರಿ ಉತ್ಸವ ಜರುಗಿತು.

error: Content is protected !!