ರಾಜ ಕಾಲುವೆ ಹೂಳು ತೆಗೆಯುವ ಕಾರ್ಯ ಚುರುಕು

ರಾಜ ಕಾಲುವೆ ಹೂಳು ತೆಗೆಯುವ ಕಾರ್ಯ ಚುರುಕು

ಮೇಯರ್ ನೇತೃತ್ವದ ತಂಡ ಭೇಟಿ-ಪರಿಶೀಲನೆ

ದಾವಣಗೆರೆ, ಮೇ 25- ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕರುಗಳಾದ  ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ್  ಆದೇಶದ ಮೇರೆಗೆ ಮಹಾನಗರ ಪಾಲಿಕೆ ಮೇಯರ್ ವಿನಾಯಕ್ ಪೈಲ್ವಾನ್ ನೇತೃತ್ವದ ತಂಡ ರಾಜ ಕಾಲುವೆಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿತು. 

ಹೊಸ ಬಸ್ ನಿಲ್ದಾಣ, ಭಾರತ್ ಕಾಲೋನಿ ಹಾಗೂ ಬಸಾಪುರ ಗ್ರಾಮದಲ್ಲಿನ ರಾಜ ಕಾಲುವೆಗಳಲ್ಲಿ ತ್ಯಾಜ್ಯ ಹಾಗೂ ಹೂಳು ತೆಗೆಯುವ ಕೆಲಸ ನಡೆಯುತ್ತಿದ್ದು, ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಮಳೆ ಸುರಿಯಲು ಶುರುವಾದರೆ ಕೆಲ ಮನೆಗಳಿಗೆ ನೀರು ನುಗ್ಗುತ್ತದೆ. ತ್ಯಾಜ್ಯ ಹಾಗೂ ಹೂಳು ಸಂಗ್ರಹವಾಗಿರುವುದರಿಂದ ವಾತಾವರಣವೂ ಮಲಿನವಾಗುತ್ತದೆ. ಈ ಕಾರಣಕ್ಕಾಗಿ ಸ್ವಚ್ಛಗೊಳಿಸುವ ಕಾರ್ಯವನ್ನು ವೇಗವಾಗಿ ನಡೆಸಿ ಪೂರ್ಣಗೊಳಿಸುವಂತೆ ಮೇಯರ್ ವಿನಾಯಕ ಮತ್ತು ಆಯುಕ್ತರಾದ ರೇಣುಕಾ ಸೂಚಿಸಿದರು.

ಮಹಾನಗರ ಪಾಲಿಕೆ ವಿರೋಧ ಪಕ್ಷದ ಮಾಜಿ ನಾಯಕ ಗಡಿಗುಡಾಳ್ ಮಂಜುನಾಥ್, ಆಯುಕ್ತರಾದ ರೇಣುಕಾ, ಪಾಲಿಕೆ ಸದಸ್ಯರಾದ ಎ. ನಾಗರಾಜ್, ಕೆ. ಚಮನ್ ಸಾಬ್, ಜಗದೀಶ್, ಇಇ ಮನೋಹರ್ ಹಾಗೂ ಎಇಇ ಶೃತಿ ಅವರು ಸಹ ಭೇಟಿ ನೀಡಿ ಕೆಲಸ ವೀಕ್ಷಿಸಿದರು. 

ಈಗಾಗಲೇ ಹೂಳು, ತ್ಯಾಜ್ಯ ತೆಗೆಯುವ ಕೆಲಸ ನಡೆಯುತ್ತಿದೆ. ಅಪಾಯಕಾರಿ ರಾಜ ಕಾಲುವೆಗಳನ್ನು ಗುರುತು ಮಾಡಲಾಗಿದೆ. ಆದ್ಯತೆ ಮೇರೆಗೆ ಎಲ್ಲೆಲ್ಲಿ ಗಂಭೀರ ಸಮಸ್ಯೆ ಇದೆಯೋ ಅಲ್ಲಿ ಕಸ, ಕಡ್ಡಿ ತೆರವುಗೊಳಿಸುವ ಕೆಲಸ ಬಿರುಸಿನಿಂದ ನಡೆಯುತ್ತಿದೆ. ಆದಷ್ಟು ಬೇಗ ಕೆಲಸ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ಇದೆ. ಅಧಿಕಾರಿಗಳೂ ಸಹ ಈ ನಿಟ್ಟಿನಲ್ಲಿ ಗಂ ಭೀರವಾಗಿ ಪರಿಗಣಿಸಿದ್ದು, ಆಯುಕ್ತರು, ಮೇಯರ್ ಸ್ಥಳಕ್ಕೆ ಬಂದು ಪರಿಸ್ಥಿತಿ ಅವಲೋಕಿ ಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದು ಗಡಿಗುಡಾಳ್ ಮಂಜುನಾಥ್ ಹೇಳಿದರು.

error: Content is protected !!