ಜಿಲ್ಲಾದ್ಯಂತ ಜು.8ರಂದು ರಾಷ್ಟ್ರೀಯ ಲೋಕ್ ಅದಾಲತ್‌

ಜಿಲ್ಲಾದ್ಯಂತ ಜು.8ರಂದು ರಾಷ್ಟ್ರೀಯ ಲೋಕ್ ಅದಾಲತ್‌

ಜಿಲ್ಲೆಯಲ್ಲಿ ಇಲ್ಲಿವರೆಗೆ 35,787 ಪ್ರಕರಣಗಳು ಬಾಕಿ: ನ್ಯಾ. ರಾಜೇಶ್ವರಿ ಎನ್. ಹೆಗಡೆ

ದಾವಣಗೆರೆ, ಜೂ. 18 – ಬರುವ ಜುಲೈ 8ರಂದು ರಾಷ್ಟ್ರೀಯ ಲೋಕ್ ಅದಾಲತ್ತನ್ನು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆಯವರೆಗೆ ಜಿಲ್ಲೆಯಲ್ಲಿ 35,787 ಪ್ರಕರಣಗಳು ಬಾಕಿ ಇವೆ. ಇವುಗಳಲ್ಲಿ ಸುಮಾರು 30 ಸಾವಿರ ಪ್ರಕರ ಣಗಳಲ್ಲಿ ರಾಜಿ ಸಾಧ್ಯವಿದೆ. ಈ ಪ್ರಕರಣಗಳಿಗಾಗಿ ಲೋಕ್ ಅದಾಲತ್ ಆಯೋಜಿಸಲಾಗುತ್ತಿದೆ ಎಂದರು.

ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಉಚಿತವಾಗಿ ಮತ್ತು ಶೀಘ್ರವಾಗಿ ಬಗೆಹರಿಸಿಕೊಳ್ಳಬಹುದು. ಗಂಭೀರ ಪ್ರಕರಣಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಸಿವಿಲ್ ಹಾಗೂ ಕ್ರಿಮಿ ನಲ್ ಪ್ರಕರಣಗಳು ಲೋಕ್ ಅದಾಲತ್ ವ್ಯಾಪ್ತಿಗೆ ಬರುತ್ತವೆ ಎಂದು ನ್ಯಾಯಮೂರ್ತಿ ಹೇಳಿದರು.

ಹೆಚ್ಚಿನ ಮಾಹಿತಿಗಳಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ (ದೂ : 08192 296364), ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ – 08192 296885, ಹೊನ್ನಾಳಿ – 08188 251732, ಚನ್ನಗಿರಿ – 08189 229195 ಹಾಗೂ ಜಗಳೂರು – 08196 227600 ಸಂಪರ್ಕಿಸಬಹುದು ಎಂದವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್, ಲೋಕ್ ಅದಾಲತ್ ಬಡವರಿಗೆ ಸಹಾಯಕವಾಗಿದೆ. ಪರಿಹಾರ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶವಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್ ಮಾತನಾಡಿ, ಸಾಮಾಜಿಕ ಸಾಮರಸ್ಯಕ್ಕೆ ಲೋಕ್ ಅದಾಲತ್ ಉಪಯುಕ್ತವಾಗಿದೆ. ಈ ದಿಸೆಯಲ್ಲಿ ನ್ಯಾಯಾಲ ಯದ ಜೊತೆ ವಕೀಲರ ಸಂಘ ಸಹಕಾರ ನೀಡಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಮೂರ್ತಿಯೂ ಆಗಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ, ಜಿಲ್ಲಾ ನ್ಯಾಯಾಲಯದ ಸಿಇಒ ಶ್ರೀನಿವಾಸ್, ವಕೀಲರ ಸಂಘದ ಕಾರ್ಯದರ್ಶಿ ಎಸ್. ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!