ಜಿಲ್ಲಾ ವಕೀಲರ ಸಂಘಕ್ಕೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಪ್ರಶಂಸೆ

ಜಿಲ್ಲಾ ವಕೀಲರ ಸಂಘಕ್ಕೆ ಹೈಕೋರ್ಟ್  ನ್ಯಾಯಮೂರ್ತಿಗಳಿಂದ ಪ್ರಶಂಸೆ

ದಾವಣಗೆರೆ, ಆ.8- ಯಶಸ್ವೀ ಮತ್ತು ಶಾಂತಿಯುತವಾಗಿ ಅತೀ ಹೆಚ್ಚಿನ ಪ್ರಕರಣಗಳನ್ನು ಲೋಕ್ ಅದಾಲತ್‍ನಲ್ಲಿ ಇತ್ಯರ್ಥ ಪಡಿಸಿದ್ದಕ್ಕಾಗಿ  ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಾಧ್ಯಕ್ಷರಾದ ಕರ್ನಾಟಕ ಹೈಕೋರ್ಟ್‍ನ ನ್ಯಾಯಮೂರ್ತಿ ಜಿ. ನರೇಂದ್ರ ಅವರು ದಾವಣಗೆರೆ ಜಿಲ್ಲಾ ವಕೀಲರ ಸಂಘಕ್ಕೆ ಪ್ರಶಂಸಾ ಪತ್ರ ನೀಡಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು. 

ಅವರು ಇಂದು ಜಿಲ್ಲಾ ವಕೀಲರ ಸಂಘದಲ್ಲಿ ಲೋಕ್ ಅದಾಲತ್ ಸಂಬಂಧ ಏರ್ಪಡಿಸಿದ್ದ ಸಮಾರಂಭದಲ್ಲಿ ವಕೀಲರ ಸಂಘದ ಅಧ್ಯಕ್ಷರಿಗೆ ಪ್ರಶಂಸಾ ಪತ್ರವನ್ನು ಹಸ್ತಾಂತರಿಸಿ ಮಾತನಾಡಿದರು.

ಲೋಕ್ ಅದಾಲತ್‍ನಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ಜಿಲ್ಲಾ ವಕೀಲರ ಸಂಘದ ಸದಸ್ಯರು ಅತೀ ಹೆಚ್ಚಿನ ಸಹಕಾರ ನೀಡಿದ್ದಕ್ಕಾಗಿ ಅಭಿನಂದಿಸಿದರು ಮತ್ತು ಮುಂದಿನ ದಿನಗಳಲ್ಲಿ ಸಹ ಸಹಕಾರವನ್ನು ಕೋರಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರಣ್ಣನವರ್ ಮಾತನಾಡಿ, ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ವಕೀಲರ ಸಂಘದ ಸದಸ್ಯರ ಸಂಪೂರ್ಣ ಸಹಕಾರವನ್ನು ಸ್ಮರಿಸಿದರು. 

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‍ಕುಮಾರ್ ಅವರು, ಭಾರತದ ನ್ಯಾಯಾಂಗ ವ್ಯವಸ್ಥೆಯು ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಕೈಗೊಳ್ಳುವ ಎಲ್ಲಾ ಕಾರ್ಯಗಳಿಗೂ ಸಂಘದ ಸಂಪೂರ್ಣ ಸಹಕಾರವಿದೆ. ಯಶಸ್ವೀ ಮತ್ತು ಶಾಂತಿಯುತ ಲೋಕ್ ಅದಾಲತ್‍ಗೆ ದಾವಣಗೆರೆಯ ಎಲ್ಲಾ ನ್ಯಾಯಾಧೀಶರು ಅತ್ಯಂತ ಹೆಚ್ಚಿನ ಸಹಕಾರವನ್ನು ನೀಡಿರುವುದಕ್ಕಾಗಿ ಧನ್ಯವಾದ ತಿಳಿಸಿದರು.

ಜಿಲ್ಲಾ ನ್ಯಾಯಾಧೀಶರಾದ ವಿಜಯಾನಂದ, ದಶರಥ್, ಶ್ರೀಪಾದ್, ಪ್ರವೀಣ್‍ಕುಮಾರ್, ಹಿರಿಯ ನ್ಯಾಯಾಧೀಶರಾದ ಶಿವಪ್ಪ ಸಲಗೆರೆ, ನಿವೇದಿತಾ, ರೇಷ್ಮಾ, ಅಫ್ತಾಬ್, ನ್ಯಾಯಾಧೀಶರಾದ ಸಮೀರ್ ಕೊಳ್ಳಿ, ಪ್ರಶಾಂತ್, ಮಲ್ಲಿಕಾರ್ಜುನ್, ಸಿದ್ಧರಾಜು, ನಾಜಿಯಾ ಕೌಸರ್, ಜಿಲ್ಲಾ ವಕೀಲರ ಸಂಘದ  ಕಾರ್ಯದರ್ಶಿ ಎಸ್. ಬಸವರಾಜ್, ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ , ಕಾರ್ಯಕಾರಿ ಸಮಿತಿ ಸದಸ್ಯರಾದ ವಾಗೀಶ್ ಕಟಗಿಹಳ್ಳಿ ಮಠ, ಮಧುಸೂದನ್, ಅಜಯ್‍ಕುಮಾರ್, ಭಾಗ್ಯಲಕ್ಷ್ಮಿ, ಚೌಡಪ್ಪ, ನಾಗರಾಜ್ ಎಲ್., ಸೇರಿದಂತೆ ಎಲ್ಲಾ ವಕೀಲರು ಸಮಾರಂಭದಲ್ಲಿ ಭಾಗವಹಿಸಿದ್ದರು.

error: Content is protected !!