ನಗರದ ಸೇವಾಲಾಲ್ ದೇವಸ್ಥಾನದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ
ದಾವಣಗೆರೆ, ಆ. 22- ಸಂಘಟಿತ ಹೋರಾಟದಿಂದ ಸಮಾಜ ಬದಲಾವಣೆ ಸಾಧ್ಯ. ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕಾರ್ಯೋನ್ಮುಖರಾಗಬೇಕೆಂದು ಮಾಜಿ ಸಚಿವರೂ, ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರೂ ಆದ ಕಾಗೋಡು ತಿಮ್ಮಪ್ಪ ಕರೆ ನೀಡಿದರು.
ನಗರದ ಸರಸ್ವತಿ ಬಡಾವಣೆಯ ಸೇವಾಲಾಲ್ ದೇವಸ್ಥಾನದ ಆವರಣದಲ್ಲಿ ಬಂಜಾರ ಸೇವಾ ಸಂಘದ ವತಿಯಿಂದ ಇಂದು ಸಂಜೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಇಚ್ಛಾಶಕ್ತಿ ರೂಢಿಸಿಕೊಳ್ಳುವ ಜೊತೆಗೆ ಜನರಲ್ಲಿ ಜಾಗೃತಿ ಉಂಟು ಮಾಡಬೇಕು. ಜನರ ಸಮಸ್ಯೆಗಳನ್ನು ಅರಿತು ಅವುಗಳಿಗೆ ಸ್ಪಂದಿಸಿದರೆ ಮಾತ್ರ ಪಕ್ಷ ಅಥವಾ ವ್ಯಕ್ತಿ ಬಗ್ಗೆ ನಂಬಿಕೆ, ವಿಶ್ವಾಸ ಮೂಡುತ್ತದೆ ಎಂದರು.
ಸಮುದಾಯದ ಜನರನ್ನು ಸಂಘಟಿಸಿ ಜಾಗ, ನಿವೇಶನ, ಹಕ್ಕುಪತ್ರ ಕೊಡಿಸುವುದು ಸೇರಿದಂತೆ ಅವರ ಅಗತ್ಯ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕೆ ಅಣಿಗೊಳಿಸಿದರೆ ನಾವು ಕೂಡ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಹೇಳಿದರು.
ರಾಜ್ಯ ಸರ್ಕಾರ ಪತನ: ಸುಳ್ಳು ಹೇಳಿಕೆ, ಭ್ರಮೆ
ದಾವಣಗೆರೆ, ಆ. 22- ಇನ್ನೂ ಕೇವಲ ಆರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂಬ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಅದು ಶುದ್ಧ ಸುಳ್ಳು, ಕೇವಲ ಭ್ರಮೆ ಅಷ್ಟೇ ಎಂದು ಮಾಜಿ ಸಭಾಪತಿ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸಾರಥ್ಯದಲ್ಲಿ ಸರ್ಕಾರ ಸುಗಮವಾಗಿ ನಡೆಯುತ್ತಿದೆ. ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರುವ ಬಗ್ಗೆ ನನ್ನ ಬಳಿ ಚರ್ಚಿಸಿದ್ದಾರೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದ್ದು, ಜನರ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನಹರಿಸಬೇಕಾಗದ ಅಗತ್ಯತೆ ಇದೆ. ಆ ಕೆಲಸವನ್ನು ಸಿದ್ಧರಾಮಯ್ಯ ಮಾಡುತ್ತಿದ್ದಾರೆ ಎಂದರು.
ಮುಖ್ಯಮಂತ್ರಿ ಬದಲಾವಣೆ ಆಗಬಹುದಾ ?
ಸಿದ್ದರಾಮಯ್ಯ ಮುಂದುವರೆಯುತ್ತಾರೆಂಬ ನಂಬಿಕೆ ಇದೆ. ಆದರೆ ಮುಂದುವರೆಸುವುದು ಬಿಡುವುದು ಕಾಂಗ್ರೆಸ್ ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟ ವಿಚಾರ. ಒಬ್ಬರಿಗೆ ಆಸ್ತಿ ಹಂಚಿ ಕೊಡಲು ಆಗಲ್ಲ. ಕೆಲವರಿಗೆ ಅವಕಾಶ ಸಿಗುತ್ತೆ. ಮುಂದೆ ಮತ್ತೊಂದು ಅವಕಾಶ ಇರುತ್ತೆ. ಪಕ್ಷ ತೀರ್ಮಾನ ಮಾಡುತ್ತದೆ ಎಂದಷ್ಟೇ ಹೇಳಿದರು. ಬಿ.ಕೆ.ಹರಿಪ್ರಸಾದ್ ತಳ ಸಮುದಾಯದವರ ಸಮಾವೇಶ ಮಾಡುತ್ತಾರೆಂಬ ಮಾತು ಕೇಳಿ ಬರುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕಾಗೋಡು ಅವರು, ಹರಿಪ್ರಸಾದ್ ಒಳ್ಳೆಯ ಲೀಡರ್, ಅಂತವರಿಗೆ ಸಹಕಾರ ಇದ್ದೇ ಇರುತ್ತದೆ. ಆದರೆ ಸಮಾವೇಶ ಮಾಡುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಎಲ್ಲವೂ ಸರಿ ಹೋಗುತ್ತವೆ ಎಂದರು.
ಲೋಕಸಭೆಗೆ ನೀವು ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟ ಉತ್ತರ ನೀಡಿದರು.
ಕೇವಲ ಕಾಗದ ಪತ್ರದಲ್ಲಿನ ಸಾಧನೆಯಾಗಬಾರದು. ಸ್ಥಳೀಯ ಸಮಸ್ಯೆಗಳನ್ನು ಆಲಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಅವರನ್ನು ಸಂಘಟಿಸುವ ಮೂಲಕ ಹೋರಾಟಕ್ಕೆ ಸಜ್ಜುಗೊಳಿಸಬೇಕು ಎಂದರು.
ಹಿರಿಯ ವಕೀಲರಾದ ಜಯದೇವನಾಯ್ಕ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಾಜಕೀಯ ಕ್ಷೇತ್ರ ಕಲುಷಿತಗೊಂಡಿದ್ದು, ರಾಜಕೀಯ ಪಕ್ಷಗಳು ಕೇವಲ ಎರಡು ಅಂಶಗಳನ್ನು ಮಾತ್ರ ಅವಲಂಬಿಸಿವೆ. ನನ್ನ ಪಕ್ಷ ಉಳಿಯಬೇಕು. ನಾನು ಅಧಿಕಾರದ ಗದ್ದುಗೆ ಏರಬೇಕು ಎಂಬುದೇ ಮುಖ್ಯವಾಗಿದೆ ಎಂದರು.
ರೈತರು, ಕಾರ್ಮಿಕರು, ಬಡವರು, ಶೋಷಿತರ ಬಗ್ಗೆ ಯಾವ ಪಕ್ಷದವರು ಚಿಂತನೆ ನಡೆಸುತ್ತಿಲ್ಲ. ಜನಪರ ಯೋಜನೆಗಳ ಕಿಂಚಿತ್ತು ಕಾಳಜಿ ವಹಿಸುತ್ತಿಲ್ಲ ಎಂದು ದೂರಿದರು.
ದಮನಿತರಿಗೆ ಎಲ್ಲಿಯವರೆಗೆ ಅಧಿಕಾರ ಸಿಗುವುದಿಲ್ಲವೋ ಅಲ್ಲಿಯವ ರೆಗೆ ಸಂವಿಧಾನಕ್ಕೆ ಬೆಲೆ ಬರುವುದಿಲ್ಲ ಎಂದ ಅವರು, ಇನ್ನೂ ಲಂಬಾಣಿ ತಾಂಡಾ, ಗೊಲ್ಲರ ಹಟ್ಟಿಗಳು, ಹಾಡಿಗಳ ಜನರಿಗೆ ನಿವೇಶನ, ಹಕ್ಕುಪತ್ರ ಸಿಗಬೇ ಕಾಗಿದೆ. ಮೂಲಭೂತ ಸವಲತ್ತುಗಳನ್ನು ಕಲ್ಪಿಸಲು ಸಾಧ್ಯವಾಗಿಲ್ಲ ಎಂದರು.
ಮಾಜಿ ಸಚಿವ ಕೆ. ಶಿವಮೂರ್ತಿ ನಾಯ್ಕ, ಪ್ರಗತಿಪರ ಹೋರಾಟಗಾರ ತೇಜಸ್ವಿ ಪಟೇಲ್ ಮಾತನಾಡಿದರು.
ವಿವಿಧ ಸಮಾಜ ಮುಖಂಡರಾದ ನಂಜಾನಾಯ್ಕ, ಶಂಕರ್, ಹೆಚ್. ಶಾಂತಾ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.