ದಾವಣಗೆರೆಯ ಶ್ರೀ ಶೈಲ ಮಠದಲ್ಲಿ ಮಂಗಳವಾರ ಏರ್ಪಾಡಾಗಿದ್ದ ಶ್ರೀಶೈಲ ಜಗದ್ಗುರು ಲಿಂ. ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಮಹಾ ಸ್ವಾಮೀಜಿಯವರ 37 ನೇ ಪುಣ್ಯಾರಾಧನೆ ಹಾಗೂ ಲಿಂ. ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ 12 ವರ್ಷದ ಸ್ಮರಣೋತ್ಸವದ ನಿಮಿತ್ಯ ಶ್ರೀ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳವರ ಮೂರ್ತಿಗಳ ಮೆರವಣಿಗೆಯು ರಾಜಬೀದಿಗಳಲ್ಲಿ ಸಂಚರಿಸಿತು. ಶ್ರೀ ಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಕೋಣಂದೂರು ಶ್ರೀ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಮತ್ತಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಿದರು.
ಲಿಂ. ಶ್ರೀಶೈಲ ಜಗದ್ಗುರು ಶ್ರೀ ಉಮಾಪತಿ ಪಂಡಿತಾರಾಧ್ಯರ ಮೂರ್ತಿಯ ಭವ್ಯ ಮೆರವಣಿಗೆ
![34 kumba mela 27.09.2023 ಲಿಂ. ಶ್ರೀಶೈಲ ಜಗದ್ಗುರು ಶ್ರೀ ಉಮಾಪತಿ ಪಂಡಿತಾರಾಧ್ಯರ ಮೂರ್ತಿಯ ಭವ್ಯ ಮೆರವಣಿಗೆ](https://janathavani.com/wp-content/uploads/2023/09/34-kumba-mela-27.09.2023-860x510.jpg)