ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿಲ್ಲ: ಎಸ್ಸೆಸ್ಸೆಂ

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿಲ್ಲ: ಎಸ್ಸೆಸ್ಸೆಂ

ಬೆಂಗಳೂರು, ಅ. 5 – ಲಿಂಗಾಯತ ಅಧಿಕಾರಿ ಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ. ಯಾರಿಗಾದರೂ ಅನ್ಯಾಯ ಆಗಿದ್ದರೂ ಸರಿ ಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಹೇಳಿದ್ದಾರೆ. ಇದೆಲ್ಲವೂ ಮುಗಿದ ಅಧ್ಯಾಯ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.

ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಹುದ್ದೆಗಳು ಸಿಗುತ್ತಿಲ್ಲ ಎಂದು ಕಾಂಗ್ರೆಸ್‌ ಹಿರಿಯ ಶಾಸಕ ಹಾಗೂ ಮಲ್ಲಿಕಾರ್ಜುನ್ ಅವರ ತಂದೆ ಶಾಮನೂರು ಶಿವಶಂಕರಪ್ಪ ಹೇಳಿದ್ದರು. ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕ ಶಿವಶಂಕರಪ್ಪ ಇಬ್ಬರೂ ಹಿರಿಯರಿದ್ದಾರೆ. ಈ ವಿಷ ಯದ ಬಗ್ಗೆ ಅವರೇ ಮಾತನಾಡಿ ಕೊಳ್ಳುತ್ತಾರೆ ಎಂದಿದ್ದಾರೆ.

ಶಿವಶಂಕರಪ್ಪನವರು ನೀಡಿ ರುವ ಹೇಳಿಕೆಗಳ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ  ಅವರು, ನಾನೂ ಊರಲ್ಲಿ ಇರಲಿಲ್ಲ. ಈಗಷ್ಟೇ ಬಂದಿದ್ದೇನೆ. ಈ ಬಗ್ಗೆ ಮಾತನಾಡಿಲ್ಲ ಎಂದರು.

error: Content is protected !!