ದಾವಣಗೆರೆ, ಅ.27- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಮತ್ತು ಶಾಸಕರು ಹಾಗೂ ರೈತ ಸಂಘಟನೆಗಳೊಂದಿಗೆ ಸಮಾಲೋಚನೆ ಮಾಡಿ ರೈತರ ಕೃಷಿ ಚಟುವಟಿಕೆಗಳಿಗಾಗಿ ದಿನದಲ್ಲಿ 5 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಬಿ.ಎಸ್ ಜಗದೀಶ್ ತಿಳಿಸಿದ್ದಾರೆ.
ಐದು ಗಂಟೆಯಲ್ಲಿ ಹಗಲು ವೇಳೆ 3 ಗಂಟೆ ಮತ್ತು ರಾತ್ರಿ ವೇಳೆ 2 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 361 ಕೃಷಿ ಪಂಪ್ಸೆಟ್ ಮಾರ್ಗಗಳಿರುತ್ತವೆ.