ದಾವಣಗೆರೆ, ನ. 2-ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಬೆಳೆಗಳಿಗೆ ಕೊನೆಯ ಹಂತದ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್ಸೆಟ್ಗಳನ್ನು ತೆರವುಗೊಳಿಸಿ, ಅಂತಹ ಪಂಪ್ಸೆಟ್ಗಳಿಗೆ ಸರಬರಾಜಾಗುವ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಗುರುವಾರ ಹೊನ್ನಾಳಿ ರಸ್ತೆಯಲ್ಲಿರುವ ಅರಳೀಪುರ, ಯಲೋದಹಳ್ಳಿ ಹಾಗೂ ಇನ್ನಿತೆರೆ ಪ್ರದೇಶಗಳ ಕಾಲುವೆ, ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ಗಳನ್ನು ತೆರವುಗೊಳಿಸಲಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.
ಭದ್ರಾ ನಾಲೆಗಳಲ್ಲಿನ ಅಕ್ರಮ ಪಂಪ್ಸೆಟ್ಗಳ ವಶ
![04 bhadra akrama pumpset news 03.11.2023 ಭದ್ರಾ ನಾಲೆಗಳಲ್ಲಿನ ಅಕ್ರಮ ಪಂಪ್ಸೆಟ್ಗಳ ವಶ](https://janathavani.com/wp-content/uploads/2023/11/04-bhadra-akrama-pumpset-news-03.11.2023-860x645.jpg)