ಕನಕದಾಸರ ಸಾಮಾಜಿಕ ಚಿಂತನೆ ಜೀವನಕ್ಕೆ ಆದರ್ಶ

ಕನಕದಾಸರ ಸಾಮಾಜಿಕ ಚಿಂತನೆ ಜೀವನಕ್ಕೆ ಆದರ್ಶ

ಜಿಲ್ಲಾ ಕಾಂಗ್ರೆಸ್‍ನಿಂದ ಕನಕದಾಸರ ಜಯಂತ್ಯೋತ್ಸವದಲ್ಲಿ ಶಾಸಕ ಎಸ್ಸೆಸ್ 

ದಾವಣಗೆರೆ, ನ.30- 16ನೇ ಶತಮಾನದಲ್ಲಿನ ಕನಕದಾಸರ ಸಾಮಾಜಿಕ ಚಿಂತನೆ ಮತ್ತು ಸಮಾನತೆಯು ಇಂದಿಗೂ ಸಹ ಆದರ್ಶಪ್ರಾಯ ಎಂದು  ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಇಂದು ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಬಹುತೇಕ ಕೀರ್ತನೆಗಳಲ್ಲಿ ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು ಎಂದರು. 

ಕನಕದಾಸರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣಿತಿ ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯ ಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ, ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಎಸ್.ಮಲ್ಲಿಕಾರ್ಜುನ್, ಮಹಿಳಾ ಮುಖಂಡರಾದ ಕವಿತಾ ಚಂದ್ರಶೇಖರ್, ದ್ರಾಕ್ಷಾಯಣಮ್ಮ, ರಾಜೇಶ್ವರಿ, ಬಾತಿ ಶಿವಕುಮಾರ್, ರಾಕೇಶ್, ಉಮೇಶ್ ಶೆಟ್ಟಿ ಮತ್ತಿತರರಿದ್ದರು.

error: Content is protected !!