ಅಂಬಿಗರ ಚೌಡಯ್ಯ ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ : ಶಾಸಕಿ ಲತಾ

ಅಂಬಿಗರ ಚೌಡಯ್ಯ ವಚನಗಳ ಮೂಲಕ  ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ : ಶಾಸಕಿ ಲತಾ

ಹರಪನಹಳ್ಳಿ, ಜ. 29 – ಅಂಬಿಗರ ಚೌಡಯ್ಯ ತಮ್ಮ ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದರು ಎಂದು ಸ್ಥಳೀಯ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್‌ ಹೇಳಿದರು.

ಅವರು ಪಟ್ಟಣದ ಬಾಬುಜಗಜೀವನರಾಂ ಸಮುದಾಯ ಭವನದಲ್ಲಿ ಗಂಗಾಮತ ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಇರುವುದು ಗಂಡು, ಹೆಣ್ಣು ಎರಡೇ ಜಾತಿಗಳು. ಆದ್ದರಿಂದ ಜಾತಿ ಪದ್ದತಿ ಹೋಗ ಬೇಕು, ನಮ್ಮ ಕುಟುಂಬವನ್ನು ಎಲ್ಲಾ ಜಾತಿ, ಜನಾಂಗದವರು ಬೆಳೆಸಿದ್ದಾರೆ ಎಂದು ಸ್ಮರಿಸಿದರು.

ತಮ್ಮ ಬೇಡಿಕೆಗಳ ಈಡೇರಿಕೆಗೆ ನನ್ನ ಅವಧಿ ಮುಗಿಯುವುದೊರಳಗೆ ಸರ್ವ ಪ್ರಯತ್ನ ಮಾಡುವುದಾಗಿ ಅವರು ಗಂಗಾಮತ ಸಮಾಜ ಬಾಂಧವರಿಗೆ ತಿಳಿಸಿದರು.

ಗಂಗಾಮತ ಸಮಾಜದ ಜಿಲ್ಲಾಧ್ಯಕ್ಷ ಅಂಬಾಡಿ ನಾಗರಾಜ ಮಾತನಾಡಿ ಅಂಬಿಗರ ಚೌಡಯ್ಯನವರ ಜೊತೆಗೆ ಮಹಾದಾರ್ಶನಿಕ ವೇದವ್ಯಾಸ ಮಹರ್ಷಿಗೂ ಅಷ್ಟೇ ಮಹತ್ವ ಕೊಡಬೇಕು ಎಂದ ಅವರು ಅಂಬಿಗರ ಚೌಡಯ್ಯನವರ ಜಯಂತಿ ದಿವಸ ವೇದವ್ಯಾಸ ಮಹರ್ಷಿ ಜಯಂತಿಯನ್ನು ಸಹ ಆಚರಿಸಬೇಕು ಎಂದು ಸಲಹೆ ನೀಡಿದರು.

ಶಿಕ್ಷಕರ ಸಂಘದ ವಿಜಯನಗರ ಜಿಲ್ಲಾಧ್ಯಕ್ಷ ಬಸವರಾಜ ಸಂಗಪ್ಪನವರ್‌ ಮಾತನಾಡಿ ಮಹಾಭಾರತವನ್ನು ಪ್ರಪಂಚಕ್ಕೆ ನೀಡಿದ ವೇದವ್ಯಾಸ ಮಹರ್ಷಿ ವಂಶಸ್ಥರು ಅಂಬಿಗರು, ಇಂತಹ ಕಾರ್ಯಕ್ರಮ ಮಾಡುವುದರಿಂದ ಸಂಘಟಿತರಾಗಲು ಸಹಕಾರಿ ಎಂದು ಹೇಳಿದರು.

ಹಾವೇರಿ ಜಿಲ್ಲೆ ನರಸೀಪುರ ಅಂಬಿಗರ ಚೌಡಯ್ಯನವರ ಗುರುಪೀಠದ ಶಾಂತಭೀಷ್ಮ ಚೌಡಯ್ಯನವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಗಂಗಾಮತ ಸಮಾಜದ ತಾಲ್ಲೂಕು ಅಧ್ಯಕ್ಷ ಡಾ.ಬಿ.ಬಿ. ಹೊಸೂರಪ್ಪ ಅಧ್ಯಕ್ಷತೆ ವಹಿಸಿದ್ದರು.

ವಕೀಲ ಕಣವಿಹಳ್ಳಿ ಮಂಜುನಾಥ ಪ್ರಾಸ್ಥಾವಿಕವಾಗಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ, ಎಸ್ಸೆಸ್ಸೆಲ್ಸಿ, ಪಿ.ಯು ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ಗಂಗಾಮತ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಹರಪನಹಳ್ಳಿ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಮುಖಂಡ ವಿನಯಕುಮಾರ ಕಕ್ಕರಗೋಳ್ಳ, ಸರ್ದಾರ ಯಮುನೂರಪ್ಪ, ಪುಟುಗಾನಳ್‌ ಟಿ. ಮಂಜುನಾಥ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್‌. ರಾಮಪ್ಪ, ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ. ರಾಜಶೇಖರ್‌, ಶಿಕ್ಷಕರ ಪತ್ತಿನ ಬ್ಯಾಂಕ್‌ ಅಧ್ಯಕ್ಷ ಬಿ. ಚಂದ್ರಮೌಳಿ, ಗಂಗಾಮತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರಿಯಮ್ಮನಹಳ್ಳಿ ಅಂಜಿನಪ್ಪ, ನಿವೃತ್ತ ಇಂಜಿನಿಯರ್‌ ಗಂಗಾಧರ, ಬಿ.ಶಿವಾನಂದಪ್ಪ ಇತರರು ಹಾಜರಿದ್ದರು.

error: Content is protected !!