ಬೆಂಗಳೂರು, ಏ. 5 – ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಕೆಪಿಸಿಸಿ ಕಛೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬಿ ಫಾರಂ ನೀಡಿ ಶುಭ ಹಾರೈಸಿದರು. ಶಾಸಕರುಗಳಾದ ಡಿ.ಜಿ. ಶಾಂತನಗೌಡ, ಶಿವಗಂಗಾ ಬಸವರಾಜ್, ಕೆ.ಎಸ್. ಬಸವಂತಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಮತ್ತಿತರರು ಉಪಸ್ಥಿತರಿದ್ದರು.
ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಸಚಿವ ಎಸ್ಸೆಸ್ಸೆಂ ಬಿ ಫಾರಂ ಸ್ವೀಕಾರ
![04 ssm b form 06.04.2024 ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಸಚಿವ ಎಸ್ಸೆಸ್ಸೆಂ ಬಿ ಫಾರಂ ಸ್ವೀಕಾರ](https://janathavani.com/wp-content/uploads/2024/04/04-ssm-b-form-06.04.2024-860x570.jpg)