ಶಿವಶಂಕರಪ್ಪನವರಂತೆ ನಾನೂ ಕ್ಷೇತ್ರದ ಅಭಿವೃದ್ಧಿಗೆ ಬದ್ಧ : ಡಾ.ಪ್ರಭಾ ಭರವಸೆ

ಶಿವಶಂಕರಪ್ಪನವರಂತೆ ನಾನೂ ಕ್ಷೇತ್ರದ ಅಭಿವೃದ್ಧಿಗೆ ಬದ್ಧ : ಡಾ.ಪ್ರಭಾ ಭರವಸೆ

ಕುಕ್ಕವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಕಾರ್ಯಕರ್ತರ ಸಭೆ

ದಾವಣಗೆರೆ, ಏ.12- ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರ ಪರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಪ್ರದೇಶದ ಕಾರ್ಯಕರ್ತರ ಸಭೆ ಇಂದು ಕುಕ್ಕವಾಡದ ದಾವಣಗೆರೆ ಶುಗರ್ಸ್ ಕಾರ್ಖಾನೆ ಆವರಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪನವರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು, ಗೃಹಲಕ್ಷ್ಮೀ ಯೋಜನೆಯಿಂದ 4,27,236 ಫಲಾನುಭವಿಗಳು, ಶಕ್ತಿ ಯೋಜನೆಯಿಂದ 30 ಲಕ್ಷಕ್ಕೂ ಅಧಿಕ ಫಲಾನುಭವಿಗಳು, 4 ಲಕ್ಷಕ್ಕೂ ಅಧಿಕ ಮನೆಗಳಿಗೆ ಗೃಹಜ್ಯೋತಿ ಸೌಲಭ್ಯ, 13 ಲಕ್ಷ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಪಾವತಿ ಮಾಡ ಲಾಗಿದ್ದು, ಜಿಲ್ಲೆಯ 4,753 ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲಾಗಿದೆ ಎಂದರು.

ಇನ್ನು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಪಂಚ ಗ್ಯಾರಂಟಿ ಗಳನ್ನು ನೀಡಲಾಗುವುದು ಎಂದ ಅವರು ಮಹಿಳಾ ನ್ಯಾಯ, ಯುವ ನ್ಯಾಯ, ಶ್ರಮಿಕ ನ್ಯಾಯ, ರೈತ ನ್ಯಾಯ ಹಾಗೂ ಪಾಲುದಾರಿಕೆ ನ್ಯಾಯ ಎಂಬ ಯೋಜನೆ ಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ನಾನು ರಾಜಕೀಯಕ್ಕೆ ಬರಲು ನಮ್ಮ ಮಾವನವರಾದ ಶಾಮನೂರು ಶಿವಶಂಕರಪ್ಪನವರು ಸ್ಫೂರ್ತಿ. ಅವರು ಈ ಇಳಿ ವಯಸ್ಸಿನಲ್ಲೂ ಸಹ ಜನರಿಗೆ ಸ್ಪಂದಿಸುವ ರೀತಿ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತರುವ ರೀತಿ ಇತರರಿಗೆ ಸ್ಪೂರ್ತಿದಾಯಕವಾಗಿದೆ ಎಂದರು.

ನಮ್ಮ ಮಾವನವರಾದ ಡಾ|| ಶಾಮನೂರು ಶಿವಶಂಕರಪ್ಪನವರ ಬೆಂಬಲ ನನ್ನ ಪತಿ ಎಸ್.ಎಸ್.ಮಲ್ಲಿಕಾರ್ಜುನ್, ನಮ್ಮ ಮಾವನವರಾದ ಎಸ್.ಎಸ್.ಗಣೇಶ್, ಎಸ್.ಎಸ್.ಬಕ್ಕೇಶ್ ಸೇರಿದಂತೆ ಕುಟುಂ ಬದ ಎಲ್ಲರ ಸಹಕಾರದಿಂದ ಇಂದು ನಾನು ಚುನಾವಣೆಗೆ ಸ್ಪರ್ಧಿಸಿದ್ದು, ನಿಮ್ಮಗಳ ಆಶೀ ರ್ವಾದ ನಮ್ಮ ಕುಟುಂಬದ ಮೇಲೆ ಸದಾ ಇದ್ದು, ಮುಂದೆಯೂ ಸಹ ಸಹಕಾರ ನೀಡು ವಿರಿ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿದ್ದು, ಇದೀಗ ಮತ್ತಷ್ಟು ಅಭಿವೃದ್ಧಿ ಕೆಲಸಕ್ಕೆ ಮಾವನವರಾದ ಡಾ|| ಶಾಮನೂರು ಶಿವಶಂಕರಪ್ಪನವರು ಅನುದಾನ ತಂದಿದ್ದು, ಈಗಾಗಲೇ ಕಾಮಗಾರಿಗಳು ಆರಂಭಗೊಂಡಿವೆ. ನಾನು ಸಹ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚಿನ ಅನುದಾನ ತರುತ್ತೇನೆ ಎಂದು ತಿಳಿಸಿದರು.

ಉದ್ಯಮಿ ಎಸ್.ಎಸ್.ಗಣೇಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರುಗಳಾದ ತುರ್ಚಘಟ್ಟದ ಎಸ್. ಬಸವರಾಜಪ್ಪ, ಹದಡಿ ಜಿ.ಸಿ.ನಿಂಗಪ್ಪ, ಪುಷ್ಪಾ ಸುರೇಶ್, ಹದಡಿ ಹಾಲಪ್ಪ, ಶಿರಮಗೊಂಡನಹಳ್ಳಿ ರುದ್ರೇಶ್, ಆರನೇಕಲ್ಲು ಮಂಜಣ್ಣ ಮತ್ತಿತರರು ಮಾತನಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂ ಡರುಗಳಾದ ದಿಳ್ಳೆಪ್ಪ, ಸುಧಾ ಮಂಜುನಾಥ್, ಕುಕ್ಕವಾಡ ಮಂಜುನಾಥ್, ಮಹೇಶ್ವರಪ್ಪ, ಲಿಂಗೇಶ್, ಶಂಕರ್, ಸತೀಶ್ ತುರ್ಚಘಟ್ಟ, ಅನ್ವರ್, ರಿಯಾಜ್, ಇರ್ಫಾನ್, ಪೂರ್ಣಿಮಾ, ಉದ್ಯಮಿ ಅಭಿಜಿತ್ ಗಣೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಹಾಗೂ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರುಗಳು, ಮುಖಂಡರುಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬೆಳವನೂರು, ಕೈದಾಳ್, ಹೊಸ ಕೊಳೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. 

error: Content is protected !!