ಜಿ.ಬಿ. ವಿನಯ್ ಕುಮಾರ್‌ಗೆ ಮತ ನೀಡಿ, ಲೋಕಸಭೆಗೆ ಕಳುಹಿಸಿಕೊಡಿ

ಜಿ.ಬಿ. ವಿನಯ್ ಕುಮಾರ್‌ಗೆ ಮತ ನೀಡಿ, ಲೋಕಸಭೆಗೆ ಕಳುಹಿಸಿಕೊಡಿ

ಐಎಎಸ್ ತರಬೇತಿ ಪಡೆಯುತ್ತಿರುವ ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮನವಿ

ದಾವಣಗೆರೆ, ಏ. 29 – ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಜಿ.ಬಿ. ವಿನಯ್ ಕುಮಾರ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಜಮ್ಮು ಕಾಶ್ಮೀರದ ಐಎಎಸ್ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ.

ಇನ್‌ಸೈಟ್ ಐಎಎಸ್‌ ಸಂಸ್ಥೆಯ ಉಪ ಕಚೇರಿಯೊಂದನ್ನು ಭಾರತದ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಸ್ಥಾಪಿಸಿ ಭಾರತ ಮಾತೆಯ ಸೇವೆ ಮಾಡುತ್ತಿರುವ ಸೈನಿಕರ ಕುಟುಂಬದ ಹೆಣ್ಣು ಮಕ್ಕಳಿಗೆ ಹಾಗೂ ಜಮ್ಮು ಕಾಶ್ಮೀರದ ಮುಸ್ಲಿಂ ಯುವತಿಯರು ಹಾಗೂ ಮಹಿಳೆಯರಿಗೆ ಉಚಿತವಾಗಿ ಐಎಎಸ್‌ ತರಬೇತಿ ನೀಡುತ್ತಿದ್ದಾರೆ. ಚುನಾವಣೆಗೆ ಸ್ಪರ್ಧೆ ಮಾಡಿರುವ ವಿನಯ್ ಕುಮಾರ್ ಅವರನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿ. ಸಂಸದರಾಗಬೇಕೆಂದು ಹಳ್ಳಿ ಹಳ್ಳಿಗಳಿಗೂ ಸುತ್ತಿದ್ದಾರೆ. ಪ್ರಚಾರ ಮಾಡುತ್ತಿದ್ದಾರೆ. ಇಂಥ ಯೋಗ್ಯ ಅಭ್ಯರ್ಥಿಗೆ ತಮ್ಮ ಅಮೂಲ್ಯ ಮತ ನೀಡಿ ಎಂದು ಕೇಳಿಕೊಂಡಿದ್ದಾರೆ.

ಜಮ್ಮು ಕಾಶ್ಮೀರ ಹಾಗೂ ಶ್ರೀನಗರದ ಐಎಎಸ್‌ ತರಬೇತಿ ಫಲಾನುಭವಿಗಳು  ವಿನಯ್ ಕುಮಾರ್ ಅವರ ಪರ ಮತ ಚಲಾಯಿಸಲು ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೂ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ಜಮ್ಮುಕಾಶ್ಮೀರದಲ್ಲಿ ನಮ್ಮಂಥ ನೂರಾರು ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದ್ದಾರೆ. ಸೈನಿಕರ ಕುಟುಂಬದ ಹೆಣ್ಣು ಮಕ್ಕಳಿಗೆ ಉಚಿತವಾಗಿ ತರಬೇತಿ ನೀಡುವ ಮೂಲಕ ಎಲ್ಲರಿಗೂ ಮಾದರಿ ಯಾಗಿದ್ದಾರೆ. ಇಂಥವರು ಲೋಕಸಭಾ ಸದಸ್ಯರಾ ದರೆ ನಿಮ್ಮ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದ್ದಾರೆ. 

error: Content is protected !!