ಚನ್ನಗಿರಿ ಠಾಣೆ ಪ್ರಕರಣ ಸಿ.ಐ.ಡಿ. ತನಿಖೆಗೆ

ಚನ್ನಗಿರಿ ಠಾಣೆ ಪ್ರಕರಣ ಸಿ.ಐ.ಡಿ. ತನಿಖೆಗೆ

ದಾವಣಗೆರೆ, ಮೇ 26 –  ಚನ್ನಗಿರಿ ಠಾಣೆಯಲ್ಲಿ ಆದಿಲ್ ಸಾವು ಸಂಭವಿಸಿದ ಹಾಗೂ ಉದ್ರಿಕ್ತ ಗುಂಪು ಪೊಲೀಸ್ ಠಾಣೆ ಧ್ವಂಸಗೊಳಿಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.

ಮಟ್ಕಾ ನಡೆಸುತ್ತಿದ್ದ ಆರೋಪದಲ್ಲಿ ಚನ್ನಗಿರಿ ಪೊಲೀಸರು ಆದಿಲ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಠಾಣೆಯಲ್ಲಿ ಆದಿಲ್ ಕುಸಿದು ಬಿದ್ದಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವು ಸಂಭವಿಸಿತ್ತು. ನಂತರ ನೂರಾರು ಜನ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿ, ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ವಾಹನಗಳು ಜಖಂ ಆಗಿದ್ದವು ಹಾಗೂ ಹಲವು ಪೊಲೀಸರು ಗಾಯಗೊಂಡಿದ್ದರು.

ಈ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿ ಹೆಗಲಿಗೆ ನೀಡಲಾಗಿದ್ದು, ಶೀಘ್ರವೇ ಸಿಐಡಿ ಅಧಿಕಾರಿಗಳು ಪ್ರಕರಣದ ಮುಂದಿನ ತನಿಖೆ ಆರಂಭಿಸಲಿದ್ದಾರೆ. ಸಿ.ಐ.ಡಿ. ಅಧಿಕಾರಿಗಳು ಈಗಾಗಲೇ ಬಂದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ‌ಪ್ರಶಾಂತ್ ತಿಳಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 25 ಆರೋಪಿಗಳನ್ನು ಬಂಧಿಸ ಲಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ ಎಂದವರು ಹೇಳಿದ್ದಾರೆ.

error: Content is protected !!