ಎಸ್ಸೆಸ್ ಆರೋಗ್ಯದಲ್ಲಿ ಚೇತರಿಕೆ

ಎಸ್ಸೆಸ್ ಆರೋಗ್ಯದಲ್ಲಿ ಚೇತರಿಕೆ

ದಾವಣಗೆರೆ, ಮೇ 31- ಕಾಂಗ್ರೆಸ್ ಹಿರಿಯ ನಾಯಕ, ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಶುಕ್ರವಾರ ಏರುಪೇರಾದ ಕಾರಣ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ‌ ಸ್ಪರ್ಷ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚೇತರಿಸಿಕೊಂಡಿದ್ದಾರೆ.

ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದಾವಣಗೆರೆ ಎಸ್.ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರನ್ನು ಬೆಂಗಳೂರಿನ ಸ್ಪರ್ಷ‌ ಆಸ್ಪತ್ರೆಗೆ ದಾಖಲಿಸಲಾಯಿತು.

ಆಸ್ಪತ್ರೆಯಲ್ಲಿ ವೈದ್ಯರೊಂದಿಗೆ ವಿಡಿಯೋದಲ್ಲಿ ಮಾತನಾಡಿರುವ ಶಿವಶಂಕರಪ್ಪ ಅವರು, ತಾವು ಆರೋಗ್ಯದಿಂದ ಇರುವುದಾಗಿ‌ ಹೇಳಿದ್ದಾರೆ.

error: Content is protected !!