ರಂಭಾಪುರಿ ಜಗದ್ಗುರುಗಳನ್ನು ಸ್ವಾಗತಿಸಿದ ಭಕ್ತರು

ರಂಭಾಪುರಿ ಜಗದ್ಗುರುಗಳನ್ನು ಸ್ವಾಗತಿಸಿದ ಭಕ್ತರು

ದಾವಣಗೆರೆ,ಜು.29- ಬಾಳೆಹೊನ್ನೂರಿನ ಶ್ರೀಮದ್‌ ರಂಭಾಪುರಿ ಜಗದ್ಗುರುಗಳು ಇಂದು ಸಂಜೆ ನಗರಕ್ಕಾಗಮಿಸಿದಾಗ ಭಕ್ತರು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು.

ನಾಳೆ ದಿನಾಂಕ 30 ರ ಮಂಗಳವಾರದಿಂದ ಬರುವ ಆಗಸ್ಟ್ 3ರವರೆಗೆ ಸ್ಥಳೀಯ ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ಏರ್ಪಾಡಾಗಿರುವ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಮತ್ತು ಜನಜಾಗೃತಿ ಧರ್ಮ ಸಮಾವೇಶವನ್ನು ನಡೆಸಿ ಕೊಡಲು ಜಗದ್ಗುರುಗಳು ನಗರಕ್ಕಾಗಮಿಸಿದ್ದಾರೆ.

ಬಾಳೆಹೊನ್ನೂರಿನ ಶ್ರೀಮದ್ವೀರಶೈವ ಸದ್ಭೋದನಾ ಸಂಸ್ಥೆಯ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ 5 ದಿನಗಳ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಪ್ರತಿದಿನ ಬೆಳಿಗ್ಗೆ 8.30ಕ್ಕೆ ನಡೆಯಲಿರುವ ಇಷ್ಟಲಿಂಗ ಮಹಾಪೂಜೆಯನ್ನು ರಂಭಾಪುರಿ ಜಗದ್ಗುರುಗಳು ನೆರವೇರಿಸುವರು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏರ್ಪಾಡಾಗಿದ್ದು, ಪ್ರತಿದಿನ ಸಂಜೆ 6.30ಕ್ಕೆ ಜರುಗಲಿರುವ ಜನಜಾಗೃತಿ ಧರ್ಮ ಸಮಾವೇಶದಲ್ಲಿ ಅನೇಕ ಗಣ್ಯರು ಪಾಲ್ಗೊಳ್ಳುವರು.

ಶ್ರೀಮದ್ವೀರಶೈವ ಸದ್ಭೋದನಾ ಸಂಸ್ಥೆಯ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್, ಶ್ರೀ ಜಗದ್ಗುರು ರೇಣುಕ ಸಾಂಸ್ಕೃತಿಕ ಸಂಘದ ಜಿಲ್ಲಾಧ್ಯಕ್ಷ ದೇವರಮನೆ ಶಿವರಾಜ್ ಅವರುಗಳ ನೇತೃತ್ವದಲ್ಲಿ ಜಗದ್ಗುರುಗಳನ್ನು ಭಕ್ತರು ಸ್ವಾಗತಿಸಿದರು.

error: Content is protected !!