ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸ ನಿರ್ಲಕ್ಷಿಸಿದರೆ ಸೂಕ್ತ ಕ್ರಮ

ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸ ನಿರ್ಲಕ್ಷಿಸಿದರೆ ಸೂಕ್ತ ಕ್ರಮ

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಎಚ್ಚರಿಕೆ

ದಾವಣಗೆರೆ. ಅ.16- ಮಹಾನಗರ ಪಾಲಿಕೆಯಲ್ಲಿ ಇ- ಸ್ವತ್ತು ಸೇರಿದಂತೆ ವಿವಿಧ ಕೆಲಸಗಳನ್ನು ನೆರವೇರಿಸಲು ಅಧಿಕಾರಿಗಳು ವಿಳಂಬ ಧೋರಣೆ ತೋರುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಬಳಿ‌ ಸಾರ್ವಜನಿಕರು ದೂರು‌ ಸಲ್ಲಿಸಿದರು.

ಮಹಾನಗರ ಪಾಲಿಕೆಯಲ್ಲಿ ನಿನ್ನೆ ನಡೆದ ನೂತನ ಮೇಯರ್ ಕೆ. ಚಮನ್ ಸಾಬ್ ಅವರ ಕಚೇರಿ ಉದ್ಘಾ ಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಮ್ಮನ್ನು ಭೇಟಿ ಮಾಡಿದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ತಕ್ಷಣವೇ ಸ್ಪಂದಿಸಿದ ಸಂಸದರು ಇ- ಸ್ವತ್ತು ಸೇರಿದಂತೆ ವಿವಿಧ ಕೆಲಸಗಳ ಬಗ್ಗೆ  ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ ಕ್ರಮಕ್ಕೆ ಸೂಚನೆ ನೀಡಿದರು. 

ಇದೇ ವೇಳೆ ಬಹಳ ದಿನಗಳಿಂದ ಒಂದೇ ಕಡೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸ್ಥಳ ಬದಲಾಯಿಸಲು ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು ಬಂದರೆ ಅಂಥವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ಮೇಯರ್ ಕೆ. ಚಮನ್ ಸಾಬ್, ಉಪಮೇಯರ್ ಸೋಗಿ ಶಾಂತಕುಮಾರ್, ಮುಖಂಡರಾದ ಡಿ. ಬಸವರಾಜ್, ವಿನಾಯಕ್ ಪೈಲ್ವಾನ್ ಹಾಗೂ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

error: Content is protected !!