ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ

ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ

ದಾವಣಗೆರೆ,ಅ. 24-  ನಗರಕ್ಕೆ  ಇಂದು ಆಗಮಿಸಿದ ಕನ್ನಡ ರಥಯಾತ್ರೆಯನ್ನು   ಸಂಭ್ರಮದಿಂದ  ಸ್ವಾಗತಿಸಲಾಯಿತು.  ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ  ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದೆ.        

ರಥಯಾತ್ರೆ ನಗರಕ್ಕೆ   ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್,  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ  ಅಧ್ಯಕ್ಷ ವಾಮದೇವಪ್ಪ, ಕನ್ನಡಪರ ಸಂಘಟನೆಯ ಮುಖಂಡರಾದ ಕೆ.ಜಿ.ಶಿವಕು ಮಾರ್, ಕೆ.ಜಿ.ಯಲ್ಲಪ್ಪ, ಎಂ.ಎಸ್. ರಾಮೇಗೌಡ, ನಾಗೇಂದ್ರ ಬಂಡೀಕರ್,  ರೈತ ಕಾರ್ಮಿಕ ಸಂಘಟನೆ ಮುಖಂಡರು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.

error: Content is protected !!