ಶಿವಾಜಿ ಮಹಾರಾಜರ ಶೌರ್ಯ ಇಂದಿನ ಜನಾಂಗಕ್ಕೂ ಸ್ಫೂರ್ತಿ

ಶಿವಾಜಿ ಮಹಾರಾಜರ ಶೌರ್ಯ ಇಂದಿನ ಜನಾಂಗಕ್ಕೂ ಸ್ಫೂರ್ತಿ

ದಾವಣಗೆರೆ, ಫೆ.19 – ಶಿವಾಜಿ ಮಹಾರಾಜರ ಹೋರಾಟ ಮನೋಭಾವ, ಧೈರ್ಯ ಹಾಗೂ ಶೌರ್ಯ ಇಂದಿನ ಜನಾಂಗಕ್ಕೂ ಸ್ಫೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಗಂಗಾಧರಸ್ವಾಮಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ವತಿಯಿಂದ ಬುಧವಾರ ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ಬಳಿಕ ಅವರು ಮಾತನಾಡಿದರು.

ಶೌರ್ಯಕ್ಕೆ ಮತ್ತೊಂದು ಹೆಸರು ಛತ್ರಪತಿ ಶಿವಾಜಿ. ಶೋಷಿತರ, ಮಹಿಳೆಯರ, ಬಡವರ ಪರ ವಾಗಿ ಶಿವಾಜಿ ಕೆಲಸ ಮಾಡಿದರು. ಚಿಕ್ಕಂದಿನಿಂದಲೇ ನಾಯಕತ್ವದ ಗುಣಗಳನ್ನು ಶಿವಾಜಿ ಮೈಗೂಡಿಸಿಕೊಂ ಡಿದ್ದರು. ಸಮಾಜದ ಎಲ್ಲಾ ವರ್ಗದ ಜನರನ್ನು ರಕ್ಷಣೆ ಮಾಡಿದ್ದರು ಎಂದು ಜಿಲ್ಲಾಧಿಕಾರಿಗಳು ಹೇಳಿದರು. 

ಹಿಂದೂ ಧರ್ಮ ರಕ್ಷಣೆ ಮಾಡಿದ ಕೀರ್ತಿ ಶಿವಾಜಿಗೆ ಸಲ್ಲುತ್ತದೆ. ಮೊಘಲರ ವಿರುದ್ಧ ಅನೇಕ ಯುದ್ಧಗಳನ್ನು ಮಾಡಿ ಅವರನ್ನು ಸೋಲಿಸಿ, ಮರಾಠ ಚಕ್ರವರ್ತಿ ಎಂದು ಗುರುತಿಸಿಕೊಂಡರು. ಇಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಸರ್ಕಾರದಿಂದ ಆಚರಿಸುತ್ತಿರುವುದು ಸಂತಸ ತಂದಿದೆ. ಶಿವಾಜಿಯ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು  ಸಮಾಜದ ಏಳಿಗೆಗಾಗಿ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಹೇಳಿದರು. 

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಮಹಾಪೌರ ಚಮನ್ ಸಾಬ್, ಪಾಲಿಕೆ ಆಯುಕ್ತರಾದ ರೇಣುಕಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷರಾದ ಯಶವಂ ತರಾವ್ ಜಾಧವ್, ಅಧ್ಯಕ್ಷ ಡಿ. ಮಾಲತೇಶರಾವ್ ಜಾಧವ್ ಮತ್ತು ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!