ಜಗದ್ಗುರು ಜಯವಿಭವ ವಿದ್ಯಾಸಂಸ್ಥೆಯಲ್ಲಿ ಕೋವಿಡ್‌ ಲಸಿಕೆ

ದಾವಣಗೆರೆ, ಜ.6- ನಗರದ ಶ್ರೀ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ಗುರುಬಸಮ್ಮ ವಿ. ಚಿಗಟೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕೋವಿಡ್‌ ಲಸಿಕೆ ನೀಡಲಾಯಿತು.

ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಅಂಬಣ್ಣ ಅವರು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮನೋಹರ್‌ ವಿ. ಚಿಗಟೇರಿ, ಗುರುಬಸಮ್ಮ ವಿ. ಚಿಗಟೇರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಹೆಚ್‌. ನಿಂಗಪ್ಪ, ಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆಯ ಹಿರಿಯ ಶಿಕ್ಷಕ ಸುರೇಶ್‌ ನಾಯ್ಕ್‌  ಮತ್ತು ಇತರರು ಹಾಜರಿದ್ದು ಲಸಿಕಾ ಕಾರ್ಯಕ್ರಮಕ್ಕೆ ಸಹಕರಿಸಿದರು.

ಲಸಿಕಾ ಕಾರ್ಯಕ್ರಮದಲ್ಲಿ ಗುರುಬಸಮ್ಮ ಶಾಲೆಯ 119 ವಿದ್ಯಾರ್ಥಿ ಗಳಿಗೆ, ಅಕ್ಕಮಹಾದೇವಿ ಶಾಲೆಯ 88 ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗೆ, ನೋಡಲ್‌ ಅಧಿಕಾರಿಗಳಿಗೆ ಸಂಸ್ಥೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

error: Content is protected !!