ಆರ್.ಜಿ. ವಿದ್ಯಾಸಂಸ್ಥೆಯ ಘಟಿಕೋತ್ಸವ

ದಾವಣಗೆರೆ, ಜ.20- ನಗರದ ಸಿದ್ಧವೀರಪ್ಪ ಬಡಾವಣೆ ಸಮೀಪವಿರುವ ಆರ್.ಜಿ. ಇನ್‌ಸ್ಟಿಟ್ಯೂಟ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್ ನ 2018  ನೇ ಸಾಲಿನ ಸ್ನಾತಕ ಪದವಿಯ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭವು ಬಂಟರ ಸಮುದಾಯ ಭವನದಲ್ಲಿ ಇಂದು ನಡೆಯಿತು.

ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಆರ್.ಜಿ. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ವೇತಾ ಆರ್. ಗಾಂಧಿ, ಮುಖ್ಯ ವ್ಯವಸ್ಥಾಪಕರಾದ ರಜತ್ ಎಸ್. ಕಟ್ಟಿಮನಿ, ಮುಖ್ಯ ಸಲಹೆಗಾರರಾದ ದಾನಪ್ಪ, ಪ್ರಾಂಶುಪಾಲ ಸುನೀಲ್ ಕುಮಾರ್, ಉಪ ಪ್ರಾಂಶುಪಾಲರಾದ ಜಿ.ಕೆ. ಗೀತಾ ಮತ್ತು ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!