ಅಂಬೇಡ್ಕರ್ ಗೆ ಅವಮಾನಿಸಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ದಾವಣಗೆರೆ, ಫೆ.3- ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಮನವಿ ಸಲ್ಲಿಸಿದರು.

ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಸಂಚಾಲಕ ಕಬ್ಬಳಿ ಮೈಲಪ್ಪ, ತಾಲ್ಲೂಕು ಸಂಚಾಲಕ ಗುಮ್ಮನೂರು ರಾಮಚಂದ್ರಪ್ಪ, ಜಿಲ್ಲಾ ಸಂಚಾಲಕರಾದ ಹೂವಿನಮಡು ಅಂಜಿನಪ್ಪ, ಕೊಡಗನೂರು ಲಕ್ಷಣ್, ಅಳಗವಾಡಿ ನಿಂಗರಾಜು, ಮಾಚಿಕೆರೆ ಸತೀಶ್, ಕೋಗಲೂರು ಪ್ರಕಾಶ್, ಕೈದಾಳ್ ಮಂಜುನಾಥ್, ಲೋಕಿಕೆರೆ ಕರಿಯಪ್ಪ, ಗಂಗನಕಟ್ಟೆ ಹನುಮಂತಪ್ಪ ಸೇರಿದಂತೆ ಕಾರ್ಯಕರ್ತರು ಇದ್ದರು.

error: Content is protected !!