ಮೀಸಲಾತಿ: ರಾಜ್ಯಪಾಲರನ್ನು ಭೇಟಿ ಮಾಡಿದ ಪಂಚಮಸಾಲಿ ಶ್ರೀ

ಹರಿಹರ, ಫೆ.3- ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. 

ತಮ್ಮ ನೇತೃತ್ವದಲ್ಲಿ ನಡೆಯುತ್ತಿರುವ ಪಂಚಮಸಾಲಿಗಳ ಮೀಸಲಾತಿ ಹೋರಾಟ, ರಾಜ್ಯದ ಪ್ರಸ್ತುತ ಬೆಳವಣಿಗೆಗಳು ಹರಿಹರದಲ್ಲಿ ನಡೆಸಲಾಗುತ್ತಿರುವ ಕಾರ್ಯಕ್ರಮಗಳ ಬಗ್ಗೆ ಶ್ರೀಗಳು ವಿಸ್ತೃತವಾಗಿ ಚರ್ಚೆ ನಡೆಸಿದರು.

ಕೇಂದ್ರ ಸಾಮಾಜಿಕ‌ ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿರುವ ರಾಜ್ಯಪಾಲರು, ದೇಶದ ಮೀಸಲಾತಿ ವ್ಯವಸ್ಥೆಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದಾರೆ. ಪಂಚಮಸಾಲಿ ಸಮುದಾ ಯಕ್ಕೆ 2-`ಎ’ ಮೀಸಲಾತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಹಲವಾರು ವಿಷಯಗಳನ್ನು ಚರ್ಚಿಸಲಾಯಿತು ಎಂದು ಶ್ರೀಗಳು ತಿಳಿಸಿದರು.

ಇದೇ ವೇಳೆ ರಾಜ್ಯಪಾಲರು ಯೋಗಾಭ್ಯಾಸ ಮತ್ತು ಹರಿಹರದಲ್ಲಿ ನಡೆಯುತ್ತಿರುವ ತುಂಗಾರತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡರು.  

ಹರ ಕ್ಷೇತ್ರಕ್ಕೆ ಭೇಟಿ ನೀಡುವಂತೆ  ರಾಜ್ಯಪಾಲರಿಗೆ ಶ್ರೀ ವಚನಾನಂದ ಮಹಾಸ್ವಾಮೀಜಿ ಮನವಿ ಮಾಡಿದರು. 

error: Content is protected !!