ಸರ್ಕಾರಿ ಸೌಲಭ್ಯ ಪಡೆಯಲು ಕಾರ್ಮಿಕರು ಸಂಘಟಿತರಾಗಬೇಕು

ಜಗಳೂರು, ಫೆ.6- ನೂತನವಾಗಿ ಸಮೃದ್ಧಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಪ್ರತಿಯೊಬ್ಬ ಕಾರ್ಮಿಕರು ಕಾರ್ಡ್ ಪಡೆದುಕೊಳ್ಳಬೇಕು ಎಂದು ರಾಜ್ಯಾಧ್ಯಕ್ಷ ರಮೇಶ್ ತಿಳಿಸಿದ್ದಾರೆ. 

ಪಟ್ಟಣದ ತಾ.ಪಂ. ಕಚೇರಿ ಮುಂಭಾಗದ ಮಳಿಗೆಯಲ್ಲಿ ನೂತನ ಸಮೃದ್ಧಿ ಕಟ್ಟಡ ಕಾರ್ಮಿಕರ ಸಂಘದ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

ಜಗಳೂರು ಪ್ರದೇಶದಲ್ಲಿ ಅತಿ ಹೆಚ್ಚು ಕಟ್ಟಡ ಕಾರ್ಮಿಕರಿದ್ದು, ಕಾರ್ಮಿಕರು ತಮ್ಮ ಹಕ್ಕುಗಳು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಸಂಘಟಿತರಾಗಿ ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡರು.

  ನೂತನವಾಗಿ ಆಯ್ಕೆಯಾದ ಕಟ್ಟಡ ಕಾರ್ಮಿಕರ ಸಂಘದ ತಾಲ್ಲೂಕು ಅಧ್ಯಕ್ಷ ವೆಂಕಟೇಶಪುರ ಸತೀಶ್ ಮಾತನಾಡಿ, ಕ್ಷೇತ್ರದ ಶಾಸಕ ಎಸ್. ವಿ. ರಾಮಚಂದ್ರರವರ ಸಹಕಾರದೊಂದಿಗೆ ಪಟ್ಟಣದಲ್ಲಿ ನೂತನವಾಗಿ ಪ್ರಾರಂಭಿಸಲಾಗಿರುವ ಸಮೃದ್ಧಿ ಕರ್ನಾಟಕ ಕಾರ್ಮಿಕರ ಸಂಘದ ಕಚೇರಿ ಉದ್ಘಾಟನೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಮಿಕರ ಬೇಡಿಕೆಗಳಿಗೆ ಸ್ವಂದಿಸಿ, ಕೆಲಸ ಮಾಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ  ಬಿಜೆಪಿ ಮುಖಂಡರಾದ ಬಿಸ್ತುವಳ್ಳಿ ಬಾಬು. ಸಿದ್ಧ ಗಂಗಾ ಅಕಾಡೆಮಿಯ ಮರಳಾರಾಧ್ಯ, ಸಿದ್ದೇಶ್. ಶಿವಮೂರ್ತಿ, ಕಾರ್ಯ ದರ್ಶಿ ಭೈರೇಶ್. ಚಿತ್ರದುರ್ಗ ತಾಲ್ಲೂಕು ಕಾರ್ಯದರ್ಶಿ ಮಹಾಂತೇಶ್. ಉಪಾಧ್ಯಕ್ಷ ದೇವರಾಜ್, ಹೊಳಲ್ಕೆರೆ ತಾಲ್ಲೂಕು ಕಾರ್ಯದರ್ಶಿ ಸುಭಾನ್, ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.  

error: Content is protected !!