ಸಂಗಮ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಎಸ್ಸೆಸ್ ಆಗ್ರಹ

ಮೈಸೂರು, ಫೆ.13- ನಂಜನಗೂಡು ತಾಲ್ಲೂಕಿನ ಸಂಗಮ ಕ್ಷೇತ್ರದಲ್ಲಿರುವ ಮಹದೇವ ತಾತನವರ ಗದ್ದುಗೆಗೆ ದಾವಣಗೆರೆ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಭೇಟಿ ನೀಡಿ ದರ್ಶನ ಪಡೆದರು.

ಇದೇ ವೇಳೆ ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಹೆಲಿಪ್ಯಾಡ್ ಉದ್ಘಾಟಿಸಿದ ಎಸ್ಸೆಸ್, ಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಗುರು ಮಹಾದೇವ ತಾತನವರು ಪೂರ್ಣ ಕಾಲದಲ್ಲಿ ಇಲ್ಲೇ ವಾಸಿಸಿ, ಈ ಭಾಗವನ್ನು ಪುಣ್ಯಕ್ಷೇತ್ರವನ್ನಾಗಿಸಿದ್ದಾರೆ ಎಂದು ತಿಳಿಸಿದರು.ಕ್ಷೇತ್ರ ಕಪಿಲಾ ನದಿ ದಡದಲ್ಲಿರುವುದರಿಂದ ಕ್ಷೇತ್ರವನ್ನು ಸರ್ಕಾರವೇ ಮುತುವರ್ಜಿ ವಹಿಸಿ ಪುಣ್ಯಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಬಿ.ಹರ್ಷವರ್ಧನ್, ಮಾಜಿ ಸಂಸದ ಆರ್.ಧ್ರುವನಾರಾಯಣ್, ಎಸ್ಸೆಸ್ ಅವರ ಪುತ್ರ, ಉದ್ಯಮಿ ಎಸ್.ಎಸ್.ಗಣೇಶ್, ಉದ್ಯಮಿ ಅಣಬೇರು ರಾಜಣ್ಣ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮುಖಂಡ ಕೆಂಡಗಣ್ಣಪ್ಪ, ಮರಿಸ್ವಾಮಿ, ಸಂಗರಾಜು ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!