4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ, ಮಲೇಬೆನ್ನೂರಿನಲ್ಲಿ ವಿಜಯೋತ್ಸವ

ಮಲೇಬೆನ್ನೂರು, ಮಾ.10- ಉತ್ತರಪ್ರದೇಶ, ಉತ್ತರ ಖಂಡ, ಮಣಿಪುರ ಮತ್ತು ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪಟ್ಟಣದ ಮುಖ್ಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾಜಿ ಶಾಸಕ ಬಿ.ಪಿ. ಹರೀಶ್‌ ಮಾತನಾಡಿ, ಪಂಚ ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ದೇಶದ ಜನ ಒಪ್ಪಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದ್ದು, ಕರ್ನಾಟಕದಲ್ಲೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ಹರಿಹರ ತಾ. ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಹಿಂಡಸಘಟ್ಟಿ ಲಿಂಗರಾಜ್‌, ದಿಶಾ ಕಮಿಟಿ ಸದಸ್ಯ ಐರಣಿ ಅಣ್ಣಪ್ಪ ಮಾತನಾಡಿದರು.

ತಾ. ಗ್ರಾ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಆದಾಪುರ ವೀರೇಶ್‌, ಪುರಸಭೆ ಸದಸ್ಯರಾದ ಬೆಣ್ಣೆಹಳ್ಳಿ ಸಿದ್ದೇಶ್‌, ಗೌಡ್ರ ಮಂಜಣ್ಣ, ಮಾಜಿ ಸದಸ್ಯ ಭಾನುವಳ್ಳಿ ಸುರೇಶ್‌, ಪಿಎಲ್‌ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಜಿ.ಎಂ. ಮಹೇಶ್ವರಗೌಡ, ಬಿಜೆಪಿ ಮುಖಂಡರಾದ ಕೆ.ಜಿ. ವೀರನಗೌಡ, ಜಿಗಳೇರ ಹಾಲೇಶಪ್ಪ, ಭಾನುವಳ್ಳಿಯ ಎ.ಕೆ. ಮಂಜಪ್ಪ, ಬೆಣ್ಣೆಹಳ್ಳಿ ಬಸವರಾಜ್‌, ದೊರೆ, ಆನಂದಚಾರ್‌, ನಿಟ್ಟೂರು ಧನಂಜಯ, ಸಂಗಮೇಶ್‌, ನ್ಯಾಯಬೆಲೆ ಅಂಗಡಿ ಮಂಜಣ್ಣ, ಪಾಳೇಗಾರ್‌ ನಾಗರಾಜ್‌, ಜಿ.ಪಿ. ಹನುಮಗೌಡ, ಕೋಮಾರನಹಳ್ಳಿಯ ಐರಣಿ ಮಹೇಶ್ವರಪ್ಪ, ಜಿ. ಸುನೀಲ್‌, ಓ.ಜಿ. ಕುಮಾರ್‌ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದ್ದರು. 

error: Content is protected !!