ಮಾಲಿನ್ಯ ನಿಯಂತ್ರಣಕ್ಕೆ ಕಾರ್ಖಾನೆಗೆ ಸೂಚನೆ

ನೀರಿನಲ್ಲಿ ಫ್ಲೋರೈಡ್ ಅಂಶ

ಜಿಲ್ಲೆಯ ಕೆಲವು ಗ್ರಾಮಗಳಲ್ಲಿನ ನೀರಿನಲ್ಲಿ ಫ್ಲೋರೈಡ್ ಅಂಶ ಇರುವ ಬಗ್ಗೆ ಮಾಹಿತಿ ಬಂದಿದ್ದು, ಇದಕ್ಕೆ ಕಾರಣಗಳನ್ನು ಕಂಡುಹಿಡಿದು, ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ.   ಇಲ್ಲಿನ ಗ್ರಾಮಗಳಲ್ಲಿ ಗಾಳಿ, ನೀರಿನಿಂದ ಹರಡುವ ರೋಗ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು.

– ಶ್ರೀಮತಿ ಪದ್ಮಾ ಬಸವಂತಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ

ಹರಿಹರ, ಫೆ. 7- ಹರಿಹರ ತಾಲ್ಲೂಕು ಚಿಕ್ಕಬಿದರಿಯ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯತ್ ಸಹ ಯೋಗದಲ್ಲಿ ಭಾನುವಾರ ಏರ್ಪಡಿ ಸಲಾದ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಚಾಲನೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಬಿದರಿ ಸಮೀಪದ ಡಿಸ್ಟಿಲರಿ ಕಾರ್ಖಾನೆ ಯಿಂದ ಹೊರಸೂಸುವ ಹಾರು ಬೂದಿ ಯಿಂದಾಗಿ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿದೆ. ಆರೋಗ್ಯ ಸಮಸ್ಯೆಗಳು ತಲೆದೋ ರುತ್ತಿವೆ ಎಂಬುದಾಗಿ ಇಲ್ಲಿನ ಗ್ರಾಮ ಸ್ಥರು ದೂರು ನೀಡಿದ್ದರು. ಹೀಗಾಗಿ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಗ್ರಾಮಸ್ಥರ ಕೋರಿಕೆ ಯಂತೆ ಆರೋಗ್ಯ ಇಲಾಖೆ ವತಿಯಿಂದ ವಿಶೇಷ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದರು.

ಗ್ರಾಮದಲ್ಲಿ ವಿಶೇಷ ಆರೋಗ್ಯ ತಪಾಸ ಣಾ ಶಿಬಿರ ಏರ್ಪಡಿಸಿದ್ದು, ಮಕ್ಕಳು, ವೃದ್ಧರು, ಮಹಿಳೆಯರು, ಗರ್ಭಿಣಿಯರು ಸೇರಿದಂತೆ ಎಲ್ಲರೂ ಆರೋಗ್ಯ ತಪಾಸಣೆ ನಡೆಸುವಂತೆ ಅನುಕೂಲ ಮಾಡಿಕೊಡಲಾಗಿದೆ.  ಒಂದು ವೇಳೆ ಆರೋಗ್ಯ ಸಮಸ್ಯೆ ಗಂಭೀರವಾಗಿದ್ದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡು ವಂತೆಯೂ ಸೂಚಿಸಲಾಗಿದೆ.  ಆರೋಗ್ಯ ಇಲಾಖೆ ನೀಡುವ ವರದಿಯನ್ನಾಧರಿಸಿ ಮುಂದಿನ ಅಗತ್ಯ ಕ್ರಮ ಜರುಗಿಸಲಾಗುವುದು.  ಗ್ರಾಮಸ್ಥರ ಆರೋಗ್ಯ ಕಾಪಾಡಲು ಜಿಲ್ಲಾಡಳಿತ ಬದ್ಧವಾಗಿದೆ ಎಂದರು.

ಕಾರ್ಖಾನೆಯಿಂದ ಹೊರ ಸೂಸುವ ಹಾರುಬೂದಿ ಹಾಗೂ ತ್ಯಾಜ್ಯದಿಂದ ಗಾಳಿ, ನೀರು ಕಲುಷಿತ ವಾಗಿರುವ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.  ಅಲ್ಲದೆ ಈ ಕುರಿತು ಬೆಂಗಳೂ ರಿನ ವಲಯ ಪರಿಸರ ಇಲಾಖಾ ಕಚೇರಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.  ಕಾರ್ಖಾನೆಯವರು ಮಾಲಿನ್ಯ ನಿಯಂತ್ರಣ ಕ್ಕಾಗಿ ನೂತನ ತಂತ್ರಜ್ಞಾನ ಅಳವಡಿಕೆಗೆ ಸೂಚಿಸ ಲಾಗುವುದು, ಇದನ್ನು ಕಾರ್ಖಾನೆ ಯವರೂ ಕೂಡ ಅಳವಡಿಸಿ, ಸೂಚನೆಯನ್ನು ಪಾಲಿಸುವ ವಿಶ್ವಾ ಸವಿದೆ.  ಈಗಾಗಲೇ ವಿವಿಧ ಇಲಾಖೆಗಳು ನೂತನ ತಂತ್ರಜ್ಞಾನಗಳನ್ನು ಅಳವಡಿಸಿ, ಪರಿಸರ ಮಾಲಿನ್ಯವನ್ನು ನಿಯಂತ್ರಿ ಸಿರುವ ನಿದರ್ಶನಗಳಿವೆ.  ಇದರ ಜೊತೆಗೆ ಇಲ್ಲಿನ ಗ್ರಾಮಗಳ ನೀರಿನ ಮಾದರಿಯನ್ನು ಸಂಗ್ರಹಿಸಿ, ಬಳಕೆಗೆ ಯೋಗ್ಯವಿರುವ ಬಗ್ಗೆ ಪರೀಕ್ಷಿಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಗ್ರಾಮಸ್ಥರ ರಕ್ತದ ಮಾದರಿ ಸಂಗ್ರಹಿಸಿ ವಿಶೇಷ ಪರೀಕ್ಷೆಗೆ ಒಳಪಡಿಸುವಂತೆಯೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು. 

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾತನಾಡಿ, ಇಲ್ಲಿನ ನೀರಿನ ಮಾದರಿಯನ್ನು ಸಂಗ್ರಹಿಸಿ, ಬಳಕೆಗೆ ಅರ್ಹವಾಗಿದೆಯೋ, ಇಲ್ಲವೋ ಎಂಬುದನ್ನು ಪರೀಕ್ಷಿಸಿ ವರದಿ ಸಲ್ಲಿಸಲಾಗುವುದು.  ಒಂದು ವೇಳೆ ನೀರಿನಲ್ಲಿ ರಾಸಾಯನಿಕ ಮಿಶ್ರಣವಾಗಿ ರುವುದು ಕಂಡುಬಂದಲ್ಲಿ, ಉನ್ನತ ತಪಾಸಣೆಗೆ ಬೆಂಗಳೂರಿಗೆ ಪರೀಕ್ಷೆಗೆ ಮತ್ತೊಮ್ಮೆ ಕಳುಹಿಸಿಕೊಡಲಾಗುವುದು ಎಂದರು.

ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಹರಿಹರ ತಹಶೀಲ್ದಾರ್ ಕೆ. ಬಿ. ರಾಮಚಂದ್ರಪ್ಪ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನಟರಾಜ್, ಹರಿಹರ ತಾ.ಆರೋಗ್ಯಾಧಿಕಾರಿ ಡಾ. ಚಂದ್ರಮೋಹನ್, ಡಾ ಕೆ.ಎಂ. ಗಿರಿಜಾ, ಡಾ ವಿಶ್ವನಾಥ ಕುಂದಗೋಳಮಠ, ಡಾ ಮಮತಾ, ಡಾ ಮಹಮ್ಮದ್ ಆಲಿ, ಡಾ. ಶಿವರಾಜ್, ಡಾ ಎಸ್. ಹೇಮಂತ್, ಡಾ ಕಿರಣ್ ಕುಮಾರ್, ಡಾ. ಮರುಳಸಿದ್ದಪ್ಪ, ಡಾ ಪ್ರತಾಪ್, ಡಾ ಪ್ರಶಾಂತ ಕುಮಾರ್, ಡಾ ಮಮತಾ, ಡಾ ನಾಗವೇಣಿ, ಡಾ ಚೇತನ್, ಆರೋಗ್ಯ ಇಲಾಖೆ ಉಮ್ಮಣ್ಣ, ಪಿಎಸ್ಐ ಡಿ. ರವಿಕುಮಾರ್, ಲತಾ ತಾವಳೇಕರ್, ಎ.ಎಸ್.ಐ. ಮಂಜುಳಾ, ಸಂತೋಷ, ಹರಿಹರ ತಾ.ಪಂ. ಇಒ ಜೆ.ಡಿ.ಗಂಗಾಧರನ್, ಸಾರಥಿ ಪಿಡಿಒ ರಾಘವೇಂದ್ರ, ಗ್ರಾಮಸ್ಥರಾದ ಗ್ರಾಪಂ ಸದಸ್ಯ ತಿಪ್ಪೇಸ್ವಾಮಿ ಲಿಂಗನಗೌಡ್ರು, ನಾಗರಾಜ್, ಆಂಜನೇಯ ಹಾಗೂ ಇತರರು ಹಾಜರಿದ್ದರು.

error: Content is protected !!