ಚನ್ನಗಿರಿ: ನೀರಿಗಾಗಿ 5.47 ಕೋಟಿ ರೂ.

ತಣಿಗೆರೆ ಗ್ರಾಮದಲ್ಲಿ ಜನಸ್ಪಂದನ ಸಭೆಯಲ್ಲಿ ಸಚಿವ ಭೈರತಿ ಬಸವರಾಜ್

ದಾವಣಗೆರೆ, ಮಾ.1- ಚನ್ನಗಿರಿ ಪಟ್ಟ ಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿ ಇಲಾಖೆಯಿಂದ 5.47 ಕೋಟಿ  ರೂ. ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಹೇಳಿದರು.

ಚನ್ನಗಿರಿ ತಾಲ್ಲೂಕಿನ ತಣಿಗೆರೆ ಗ್ರಾಮ ದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಂತೇಬೆ ನ್ನೂರು ಹೋಬಳಿ ಮಟ್ಟದ ಜನ ಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಕಳೆದ 3 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಗಾಗಿ ಸರ್ಕಾರದಿಂದ ಜಲಜೀವನ್ ಮಿಷನ್ ಯೋಜನೆಯಡಿ ಯಲ್ಲಿ ಕುಡಿಯುವ ನೀರಿನ ಯೋಜನೆಯಡಿ ಪ್ರತಿಯೊಂದು ಗ್ರಾಮದಲ್ಲೂ ಜನರ ಮನೆ ಮನೆಗೆ ಕುಡಿಯುವ ನೀರಿನ  ವ್ಯವಸ್ಥೆಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಂ ಡಿದ್ದು ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುವುದು ತಪ್ಪಲಿದೆ ಎಂದರು.

ಸೋಮವಾರ ಈ ಭಾಗದಲ್ಲಿ 28.79 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳು ನೆರವೇ ರಿದ್ದು, ಶಾಸಕರ ಕಾಳಜಿಯಿಂದಾಗಿ ತಾಲ್ಲೂಕು ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ ಎಂದರು.

ಜನಸ್ಪಂದನ ಕಾರ್ಯಕ್ರಮದ ಮುಖ್ಯ ಉದ್ದೇಶ ಗ್ರಾಮಗಳ ಅಭಿವೃದ್ಧಿಯಾಗಿದೆ. ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ದೇವಸ್ಥಾನ ಗಳ ಜೀರ್ಣೋದ್ದಾರ, ಸಮು ದಾಯ  ಭವ ನಗಳ ನಿರ್ಮಾಣ, ಶಾಲೆಗಳ ನವೀಕರಣಕ್ಕಾಗಿ ಸರ್ಕಾರದಿಂದ 28.79 ಲಕ್ಷ ರೂ. ಮಂಜೂರು ಮಾಡಲಾಗಿದೆ ಎಂದರು.

ರೈತರು, ಬಡವರು, ಮತ್ತು ದೀನ-ದಲಿತರಿ ಗಾಗಿ ಕೃಷಿ ಯಂತ್ರೋಪಕರಣ ಹಾಗೂ ಕೈಗಾಡಿ ಗಳನ್ನು ಫಲಾನುಭವಿಗಳಿಗೆ ವಿತರಿಸಿದ ಅವರು, ಗ್ರಾಮದ ಜನರು ಆರ್ಥಿಕವಾಗಿ ಸಬಲರಾಗ ಬೇಕಾದರೆ ಸರ್ಕಾರದಿಂದ ಬರುವ  ಅನುದಾನದ  ಸೌಲಭ್ಯ ಪಡೆದು ಸದುಪಯೋಗ ಪಡೆದು ಕೊಳ್ಳ ಬೇಕು. ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಪಡೆದು ವ್ಯವಸಾಯಕ್ಕೆ ರೈತರು ಬಳಸಿಕೊಳ್ಳ ಬಹುದು. ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ಕೇಂದ್ರದಿಂದ 6 ಸಾವಿರ ರೂ.ಮತ್ತು ರಾಜ್ಯ ಸರ್ಕಾರದಿಂದ 4 ಸಾವಿರ ರೂ.  ಹಣ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಎಸ್.ಡಿ.ಎಲ್. ನ ಅಧ್ಯಕ್ಷರು ಹಾಗೂ ಚನ್ನಗಿರಿ ಕ್ಷೇತ್ರದ ಶಾಸಕ ಕೆ.ಮಾಡಾಳ್ ವಿರುಪಾಕ್ಷಪ್ಪ ಅವರು ಜನರು ಅಧಿಕಾರಿಗಳು ಮತ್ತು  ಜನಪ್ರತಿನಿಧಿಗಳನ್ನು ಹುಡುಕುವ ಬದಲಾಗಿ ಅವರೇ  ಜನರ ಬಳಿ ಬಂದಾಗ ಸಮಸ್ಯೆಗಳು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ತಿಳಿಯುತ್ತವೆ.  ಇದರಿಂದ ನಾವು ಮಾಡಬೇಕಾಗಿರುವ ಕೆಲಸದ ಅರಿವು ನಮಗಾಗುತ್ತದೆ ಎಂದರು.

ಇಂದು ಸರ್ಕಾರ ಮತ್ತು ಅಧಿಕಾರಿಗಳು ನಿಮ್ಮ ಬಳಿಗೆ ಬಂದು ಸುಮಾರು 37.70 ಲಕ್ಷ ರೂ.ಗಳ ವಿವಿಧ ಪ್ರಯೋಜನಗಳನ್ನು ವಿತರಿಸಲಾಗಿದೆ.  60 ವರ್ಷ ಮೇಲ್ಪಟ್ಟಂತಹ ಜನರನ್ನು ಅಧಿಕಾರಿಗಳೇ ಗುರುತು ಮಾಡಿ ಅವರಿಗೆ ಮುಂದಿನ ತಿಂಗಳಿಂದಲೇ ಮಾಸಾಶನ ನೀಡುವಂತೆ ನಿರ್ದೇಶನ ನೀಡಲಾಗಿದೆ  ಎಂದರು.

ಇಂದು ಬಹಳ ಜನ ರೈತರು ಬಗರ್ ಹುಕ್ಕುಂ ಸಾಗುವಳಿ ಮಾಡಿದ್ದು ಅಂತಹವರಿಗೆ ಸರ್ಕಾರದ ಜಮೀನನ್ನು ಕೊಡಲು ಅವಕಾಶವಿದ್ದರೆ ಹಾಗೂ ಅರಣ್ಯ ಇಲಾಖೆಯ ಆಕ್ಷೇಪಣೆ ಇಲ್ಲದಿದ್ದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಸರ್ಕಾರದ ಮತ್ತೊಂದು ಯೋಜನೆಯಾದ `ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಇಂತಹ ಕಾರ್ಯಕ್ರಮಗಳ ಮೂಲಕ ಸರ್ಕಾರ ಮಧ್ಯವರ್ತಿ ಗಳ ಹಾವಳಿ ತಪ್ಪಿಸಿ ನೇರವಾಗಿ ಫಲಾನುಭವಿಗಳಿಗೆ ಸೌಲಭ್ಯ ನೀಡುತ್ತಿದೆ  ಎಂದರು.

ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಕೆ.ವಿ.ಶಾಂತಕುಮಾರಿ, ಉಪಾಧ್ಯಕ್ಷರಾದ ಸಾಕಮ್ಮ ಗಂಗಾಧರನಾಯ್ಕ್, ಚನ್ನಗಿರಿ ತಾಲ್ಲೂಕು ಪಂಚಾಯ್ತಿ  ಅಧ್ಯಕ್ಷೆ ಕವಿತಾ ಕಲ್ಲೇಶ್, ಉಪಾಧ್ಯಕ್ಷೆ ಚಂದ್ರಮ್ಮ ರುದ್ರಪ್ಪ, ತಣಿಗೆರೆ ಗ್ರಾ.ಪಂ. ಅಧ್ಯಕ್ಷೆ ವಾಣಿ ಪ್ರಕಾಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್ಪಿ ಹನುಮಂತರಾಯ, ಜಿ.ಪಂ. ಸಿಇಒ ವಿಜಯ ಮಹಾಂತೇಶ್ ಬಿ. ದಾನಮ್ಮನವರ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ, ಪ್ರಭಾರ ಪೊಲೀಸ್ ಉಪಾಧೀಕ್ಷಕ ಬಸವರಾಜ್ ಬಿ ಎಸ್, ಚನ್ನಗಿರಿ ತಹಶೀಲ್ದಾರ್ ಡಾ. ಪುಟ್ಟರಾಜ ಗೌಡ ಮುಂತಾದವರು ಉಪಸ್ಥಿತರಿದ್ದರು.

error: Content is protected !!