ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಪ್ರತಿರೋಧ ವ್ಯಕ್ತಪಡಿಸುವವರಿಗೆ ಸಹಕರಿಸಬೇಡಿ

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಪ್ರತಿರೋಧ ವ್ಯಕ್ತಪಡಿಸುವವರಿಗೆ ಸಹಕರಿಸಬೇಡಿ - Janathavaniದಾವಣಗೆರೆ, ಮೇ 2- ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿಯನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿ ಸಿದ ಬಗ್ಗೆ ವರದಿಯನ್ನು ಸರ್ಕಾರದ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸ ಬೇಕಿದ್ದು, ಸಾರ್ವಜನಿಕರು ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಯಾವುದೇ ಕಾರಣಕ್ಕೂ ಪ್ರತಿರೋಧ ವ್ಯಕ್ತಪಡಿಸ ಬಾರದಾಗಿ ಹಾಗೂ ಪ್ರತಿರೋಧ ವ್ಯಕ್ತಪಡಿಸುವ ವ್ಯಕ್ತಿಗಳಿಗೆ ಸಹಕಾರ ನೀಡಬಾರದು ಎಂದು ತಹಶೀಲ್ದಾರ್ ಬಿ.ಎನ್. ಗಿರೀಶ್ ತಿಳಿಸಿದ್ದಾರೆ.

ಸರ್ಕಾರದ ಆದೇಶದನ್ವಯ ಸಾರ್ವಜನಿಕ ಸ್ಥಳಗಳಲ್ಲಿ 2009 ರ ಸೆ. 29 ಕ್ಕೂ ಮುಂಚಿತವಾಗಿ ಅನಧಿ ಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡ ಗಳನ್ನು ಆ ಪ್ರದೇಶದ ಪ್ರಶಾಂತತೆಗೆ ಭಂಗವುಂಟು ಮಾಡುವುದಿಲ್ಲವೆಂದು ಖಚಿತ ಪಟ್ಟಲ್ಲಿ, ಅಂತಹ ಕಟ್ಟಡಗಳನ್ನು ಕೆಟಿಸಿಪಿ ಕಾಯ್ದೆ, ಮುನಿಸಿಪಾಲಿಟಿ ಕಾಯ್ದೆ, ಪುರಸಭೆ ಕಾಯ್ದೆ ಮತ್ತು ಇತರೆ ಸ್ಥಳೀಯ ಕಾನೂನು, ಕಾಯ್ದೆಗಳಿಗೆ ವ್ಯತಿರಿಕ್ತವಾಗಿಲ್ಲದಿದ್ದಲ್ಲಿ, ಅವುಗಳನ್ನು ಉಳಿಸಿ ಕೊಂಡು ಕಾನೂನು ಕಾಯ್ದೆಗೊಳಪಟ್ಟಂತೆ ಅಧಿಕೃತಗೊಳಿಸ ಬಹುದಾಗಿರುತ್ತದೆ. 

ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಮಸ್ತ ನಾಗರಿಕರಲ್ಲಿ ನಿಮ್ಮ ನಿಮ್ಮ ಗ್ರಾಮ/ಓಣಿ/ಮೊಹಲ್ಲಾ/ಕೇರಿ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ನೀವುಗಳೇ ಸ್ವಪ್ರರೇಣೆಯಿಂದ ತೆರವುಗೊಳಿಸುವುದು ಮತ್ತು ನಿರ್ಮಾಣವಾಗದಂತೆ ಎಚ್ಚರವಹಿಸು ವುದು, ಒಂದು ವೇಳೆ ತೆರವುಗೊಳಿಸದೇ ಇದ್ದಲ್ಲಿ ಇಂತಹ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತಾಲ್ಲೂಕು ಆಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ತೆರವುಗೊ ಳಿಸಲಿದ್ದು, ಈ ತೆರವು ಕಾರ್ಯಾಚರಣೆಗೆ ಅಗತ್ಯ ಸಹಕಾರವನ್ನು ನೀಡಲು ತಿಳಿಸಿದೆ.

ಸಾರ್ವಜನಿಕ ರಸ್ತೆಗಳಲ್ಲಿ, ಸಾರ್ವಜನಿಕ ಉದ್ಯಾನವನಗಳಲ್ಲಿ ಅನಧಿಕೃತವಾಗಿ ನಿರ್ಮಿಸ ಲಾಗಿರುವ ಮತ್ತು ಧಾರ್ಮಿಕ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿಕರು ಈ ಕುರಿತು ಜಿಲ್ಲಾಧಿಕಾರಿಗಳಿಗೆ, ತಾಲ್ಲೂಕು ತಹಶೀಲ್ದಾರರುಗಳಿಗೆ ಮತ್ತು ಸ್ಥಳೀಯ ಸಂಸ್ಥೆಯ ಮುಖ್ಯಸ್ಥರಿಗೆ ಮಾಹಿತಿಯನ್ನು ಒದಗಿಸಬಹುದು ಹಾಗೂ ಮಾಹಿತಿಯನ್ನು ಒದಗಿಸುವ ಸಾರ್ವಜನಿಕರ ಹೆಸರನ್ನು ಬಹಿರಂಗ ಪಡಿಸದೇ ರಹಸ್ಯವಾಗಿಡಲಾಗುವುದು ಎಂದು ಗಿರೀಶ್ ತಿಳಿಸಿದ್ದಾರೆ.

error: Content is protected !!