ನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ

ನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ - Janathavaniದಾವಣಗೆರೆ, ಮಾ. 10- ಮಹಾನಗರ ಪಾಲಿಕೆ ಮೇಯರ್ ಎಸ್.ಟಿ ವೀರೇಶ್  ಅಧ್ಯಕ್ಷತೆಯಲ್ಲಿ ಪಾಲಿಕೆಯ 4 ಸಮಿತಿಗಳ ಅಧ್ಯಕ್ಷರು ಗಳನ್ನು ಆಯ್ಕೆ ಮಾಡಲಾಯಿತು.

ತೆರಿಗೆ ನಿರ್ವಹಣೆ ಮತ್ತು ಅಪೀ ಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಶ್ರೀನಿವಾಸ್, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಲ್.ಡಿ ಗೋಣೆಪ್ಪ, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಮತಿ ಉಮಾ ಪ್ರಕಾಶ್  ಹಾಗೂ ಲೆಕ್ಕ ಪತ್ರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಮತಿ ಗೀತಾ ದಿಳ್ಯಪ್ಪ ಅವರುಗಳು ಆಯ್ಕೆಯಾಗಿದ್ದಾರೆ.

error: Content is protected !!