ಅಮೂಲ್ಯ ಸಮಯ ವ್ಯರ್ಥ ಮಾಡದಿರಿ

ಡಿ.ಆರ್.ಆರ್. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಚಿತ ಟ್ಯಾಬ್ಲೆಟ್ ವಿತರಣೆಯಲ್ಲಿ ಮೇಯರ್ ವೀರೇಶ್‌ ಕರೆ

ದಾವಣಗೆರೆ, ಏ. 23- ಕೋವಿಡ್ ಸಂಕಷ್ಟದಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕಲಿಕೆಯನ್ನು ಅತ್ಯಂತ ಸರಳ ಮತ್ತು ಸುಲಭಗೊಳಿಸುವಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಉಚಿತ ಟ್ಯಾಬ್ಲೆಟ್ ಪಿ.ಸಿ.ಗಳ ವಿತರಣಾ ಕಾರ್ಯಕ್ರಮವು   ನಗರದ ಡಿ.ಆರ್.ಆರ್. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ನಡೆಯಿತು.

ಶಾಸಕ ಎಸ್.ಎ. ರವೀಂದ್ರನಾಥ್ ಅವರು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಿಸಿದರು. ಪ್ರಾಂಶುಪಾಲ ಜಿ.ಬಿ. ಸದಾನಂದಪ್ಪ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಹಾಪೌರ ಎಸ್.ಟಿ. ವೀರೇಶ್  ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ಅನಾವಶ್ಯಕವಾಗಿ ವ್ಯರ್ಥ ಮಾಡದೇ  ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ಕಾಲೇಜಿಗೆ ಕೀರ್ತಿ ತರಬೇಕೆಂದು ಕರೆ ನೀಡಿದರು.

ಕು. ಸಂಜನಾ ಪ್ರಾರ್ಥಿಸಿದರು. ಉಪನ್ಯಾಸಕರಾದ ಹೆಚ್.ಕೆ. ಮಂಜಪ್ಪ ಕಾರ್ಯಕ್ರಮ ನಿರೂಪಿಸಿದರು. ಜಿ. ಪ್ರಕಾಶ್ ಸ್ವಾಗತಿಸಿದರು. ನವೀನ್‌ ಕುಮಾರ್ ವಂದಿಸಿದರು.  

error: Content is protected !!