ಶಾಸಕರ ನಿಧಿ ಅನುದಾನದಲ್ಲಿ ಆಂಬ್ಯುಲೆನ್ಸ್ ಕೊಡುಗೆ

ದಾವಣಗೆರೆ, ಆ.8 – ಕೊರೊನಾ ರೋಗಿಗಳಿಗೆ ತುರ್ತು ಸೇವೆ ಒದಗಿಸುವ ನಿಟ್ಟಿನಲ್ಲಿ ಶಾಸಕರುಗಳ ನಿಧಿ ಅನುದಾನದಡಿ ಶಾಸಕ ಎಸ್.ಎ.ರವೀಂದ್ರನಾಥ್, ಪ್ರೊ.ಲಿಂಗಣ್ಣ ಹಾಗೂ ಮಾಡಾಳು ವಿರೂಪಾಕ್ಷಪ್ಪ ಅವರು ಒದಗಿಸಿರುವ ನಾಲ್ಕು ಸುಸಜ್ಜಿತವಾದ ಆಂಬ್ಯುಲೆನ್ಸ್‍ಗಳನ್ನು ಶನಿವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.

ಶಾಸಕ ಎಸ್.ಎ.ರವೀಂದ್ರನಾಥ್ ಅವರು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ, ಶಾಸಕ ಪ್ರೊ.ಲಿಂಗಣ್ಣ ಮಾಯಕೊಂಡ, ಬಸವಾಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಾಗೂ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ನಿಧಿಯಿಂದ ಪಡೆದ ಆಂಬ್ಯುಲೆನ್ಸ್ ಅನ್ನು ಚನ್ನಗಿರಿ ತಾಲ್ಲೂಕು ಆಸ್ಪತ್ರೆ ಸೇರಿದಂತೆ ಒಟ್ಟು 4 ಆಂಬ್ಯುಲೆನ್ಸ್‌ಗಳ ಸೇವೆಗೆ ಜಿಲ್ಲಾಡಳಿತ ಭವನದಲ್ಲಿ ಗೌರವ ಸಮರ್ಪಿಸಿದರು.

ಶಾಸಕ ರವೀಂದ್ರನಾಥ್ ಮಾತನಾಡಿ, ಶಾಸಕರ ನಿಧಿಯಿಂದ ಆಕ್ಸಿಜನ್ ಪ್ಲ್ಯಾಂಟ್ ಹಾಗೂ ಮೆಗಾ ಘಟಕಗಳಿಗೆ 25 ಲಕ್ಷ ರೂ ಬಿಡುಗಡೆ ಮಾಡಿದ್ದು, ರೋಗಿಗಳ ಅನುಕೂಲ ಕ್ಕಾಗಿ ಜಿಲ್ಲಾ ಆಸ್ಪತ್ರೆಗೆ ಆಂಬ್ಯುಲೆನ್ಸ್ ಸೇವೆ ಒದಗಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಅವರು ಮಾತನಾಡಿ, ಶಾಸಕರ ಅನುದಾನದಡಿ ಯಲ್ಲಿ ಒಟ್ಟು 6 ಆಂಬ್ಯುಲೆನ್ಸ್ ಖರೀದಿ ಮಾಡಿದ್ದು, ಆಯಾ ತಾಲ್ಲೂಕುಗಳಿಗೆ ಕಳಿಸಿಕೊ ಡುವ ವ್ಯವಸ್ಥೆ ಮಾಡಿದ್ದೇವೆ. ಅದರಲ್ಲಿ ನಾಲ್ಕು ಬಸವಾಪಟ್ಟಣ, ಮಾಯಕೊಂಡ ಆಸ್ಪತ್ರೆಗಳಿಗೆ ಹಾಗೂ ಚನ್ನಗಿರಿ ಮತ್ತು ದಾವಣಗೆರೆ ಜಿಲ್ಲಾಸ್ಪತ್ರೆ ಗಳಿಗೆ ನೀಡಿದ್ದು, ಉಳಿದ ಎರಡು ಆಂಬ್ಯುಲೆನ್ಸ್ ನ್ಯಾಮತಿ ಹಾಗೂ ಹೊನ್ನಾಳಿ ತಾಲ್ಲೂಕುಗಳಿಗೆ ಆಯಾ ಶಾಸಕರ ಅನುಮತಿ ಮೇರೆಗೆ ಕಳಿಸಿಕೊಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ರಿಷ್ಯಂತ್, ಡಿಹೆಚ್‍ಒ ಡಾ.ನಾಗರಾಜ್, ಜಿಲ್ಲಾ ಸರ್ಜನ್ ಡಾ.ಜಯಪ್ರಕಾಶ್ ಸೇರಿದಂತೆ, ಮತ್ತಿತರರು ಉಪಸ್ಥಿತರಿದ್ದರು.

error: Content is protected !!