ಪುನೀತ್‌ಗೆ ಮರಣೋತ್ತರ ಕರ್ನಾಟಕ ರತ್ನ

ಪುನೀತ್‌ಗೆ ಮರಣೋತ್ತರ ಕರ್ನಾಟಕ ರತ್ನ - Janathavaniಬೆಂಗಳೂರು, ನ. 16- ಇತ್ತೀಚೆಗೆ ನಿಧನ ರಾದ ಚಿತ್ರನಟ ಪುನೀತ್ ರಾಜ್‌ ಕುಮಾರ್ ಅವರಿಗೆ ಮರಣೋ ತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡನಾಡಿನ ಜನ ಪ್ರಿಯ ಕಲಾವಿದ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.

ಅರಮನೆ ಮೈದಾನದಲ್ಲಿ ಆಯೋಜಿಸ ಲಾಗಿದ್ದ ಪುನೀತ ನಮನ ಕಾರ್ಯಕ್ರಮವನ್ನು ದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಅಗಲಿದ ನಟನಿಗೆ ಮರಣೋತ್ತರ ಕರ್ನಾಟಕ ರತ್ನ ಘೋಷಿಸಿ, ವರನಟ ಡಾ. ರಾಜ ಕುಮಾರ್ ಅವರರಂತೆ ಪುನೀತ್‌ಗೂ ಸ್ಮಾರಕ ನಿರ್ಮಿಸುವುದಾಗಿ ಹೇಳಿದ್ದಾರೆ.  ಪುನೀತ್ ಅತ್ಯುತ್ತಮ ಚಾರಿತ್ರ್ಯದ ಕಾರಣ ಇತಿಹಾಸದ ಪುಟಗಳಲ್ಲಿ ಸೇರಿದ್ದಾರೆ. ಅವರಂತೆ ವಿನಯ, ವಿಧೇಯತೆಯನ್ನು ರೂಢಿಸಿಕೊಂಡ ವರು ಕಡಿಮೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಕೇವಲ ಕರ್ನಾಟಕ ರತ್ನ ಮಾತ್ರವಲ್ಲದೆ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೂ ಪುನೀತ್ ಭಾಜನರಾಗುವ ಬಗ್ಗೆ ಚಿಂತನೆ ನಡೆಸಲಾಗುವುದು. ಡಾ ರಾಜ್ ಕುಮಾರ್ ಸ್ಮಾರಕದಂತೆ ಪುನೀತ್ ಸ್ಮಾರಕವನ್ನೂ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

error: Content is protected !!