ರೋಗಿಗಳ ಆರೋಗ್ಯ ಸುಧಾರಣೆಗೆ ಮಹತ್ವ ಕೊಟ್ಟು ವೃತ್ತಿ ಗೌರವ ಕಾಪಾಡಿ

ಪ್ರೊ. ಡಾ. ರೈಸನ್ ಥಾಮಸ್

ದಾವಣಗೆರೆ, ಡಿ. 8- ದಂತ ವೈದ್ಯರು ರೋಗಿಗಳ ಆರೋಗ್ಯ ಸುಧಾರಣೆಗೆ ಹೆಚ್ಚಿನ ಮಹತ್ವ ಕೊಟ್ಟು ವೃತ್ತಿ ಗೌರವ ಕಾಪಾಡಬೇಕು ಎಂದು ನಗರದ ದಂತ ವೈದ್ಯಕೀಯ ಕಾಲೇಜಿನ ಪ್ರೊ. ಡಾ. ರೈಸನ್ ಥಾಮಸ್ ಕರೆ ನೀಡಿದರು. ಸ್ಥಳೀಯ ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಿನ್ನೆ ಏರ್ಪಾಡಾಗಿದ್ದ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಬಿ. ಮುರುಗೇಶ್ ಮಾತನಾಡಿ, ಆರೋಗ್ಯವಂತ ಸಮಾಜ ಕಟ್ಟುವಲ್ಲಿ ನಾವೆಲ್ಲ ಶ್ರಮಿಸಬೇಕಿದೆ ಎಂದು ಹೇಳಿದರು.

error: Content is protected !!