ಬೆಳೆ ಹಾನಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯ

ಬೆಳೆ ಹಾನಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯ - Janathavaniಮಲೇಬೆನ್ನೂರು, ಡಿ. 17- ಅಕಾಲಿಕ ಮಳೆಯಿಂದಾಗಿ ಹರಿಹರ ತಾಲ್ಲೂಕಿನಲ್ಲಿ ಸಾವಿರಾರು ಎಕರೆ ಭತ್ತದ ಬೆಳೆಗೆ ಹಾನಿಯಾಗಿದ್ದು, ಕೂಡಲೇ ಪರಿಹಾರ ನೀಡುವಂತೆ ಶಾಸಕ ಎಸ್ .ರಾಮಪ್ಪ ಸರ್ಕಾರವನ್ನು ಒತ್ತಾಯಿಸಿದರು. 

ಈ ಕುರಿತು ಗುರುವಾರ ವಿಧಾನಸಭೆ ಅಧಿವೇಶನದಲ್ಲಿ  ಮಾತನಾಡಿದ ಅವರು ಸರ್ಕಾರ ಒಂದು ಎಕರೆ ಭತ್ತದ ಬೆಳೆ ಹಾನಿಗೆ ಕನಿಷ್ಠ 10 ಸಾವಿರ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಅಲ್ಲದೆ ಮಲೇಬೆನ್ನೂರು ಪಟ್ಟಣಕ್ಕೆ ಈ ಹಿಂದೆ ಮಂಜೂರಾಗಿದ್ದ 500 ಮನೆಗಳನ್ನು  ತಡೆಹಿಡಿಯಲಾಗಿದ್ದು ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ರಾಮಪ್ಪ ಮನವಿ ಮಾಡಿದರು.

error: Content is protected !!