ಲೋಕ ಅದಾಲತ್: 843 ಪ್ರಕರಣಗಳು ಇತ್ಯರ್ಥ

ಹರಪನಹಳ್ಳಿ, ಡಿ.20- ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಒಟ್ಟು 843 ಪ್ರಕರಣಗಳನ್ನು ಉಭಯ ನ್ಯಾಯಾಲಯದ ನ್ಯಾಯಾಧೀಶರಾದ ಎಂ. ಭಾರತಿ, ಮತ್ತು ಫಕ್ಕೀರವ್ವ ಕೆಳಗೆರೆ ಅವರ ನೇತೃತ್ವದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಭಾರತಿಯವರ ನೇತೃತ್ವದಲ್ಲಿ ಒಟ್ಟು 423 ಪ್ರಕರಣಗಳನ್ನು ಇತ್ಯರ್ಥಪಡಿಸಿ, 72,83,788 ರೂ.ಗಳನ್ನು ಹಣದ ರೂಪದಲ್ಲಿ ಇತ್ಯರ್ಥ ಪಡಿಸಿದರು.

ಕಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಫಕ್ಕೀರವ್ವ ಕೆಳಗೆರೆ ರವರ ನೇತೃತ್ವದಲ್ಲಿ ಒಟ್ಟು 420 ಪ್ರಕರಣ ಗಳನ್ನು ಇತ್ಯರ್ಥಪಡಿಸಿ 13,35,004 ರೂ. ಗಳನ್ನು ಹಣದ ರೂಪದಲ್ಲಿ ಇತ್ಯರ್ಥ ಪಡಿಸಿದರು.

ಅದಾಲತ್‍ನಲ್ಲಿ ರಸ್ತೆ ಅಪಘಾತ, ಚೆಕ್ ಬೌನ್ಸ್ , ಬ್ಯಾಂಕ್ ಸಾಲ ವಸೂಲಿ, ಜಮೀನು ಒತ್ತುವರಿ, ಕೌಟುಂಬಿಕ ದೌರ್ಜನ್ಯ, ಕ್ರಿಮಿನಲ್‌ ಪ್ರಕರಣ, ಮೋಟಾರು ವಾಹನ, ನಿವೇಶನ ಮಾರಾಟ ಒಳಗೊಂಡಂತೆ ತಾಲ್ಲೂಕಿನಾದ್ಯಂತ ಒಟ್ಟು 843  ಪ್ರಕರಣಗಳನ್ನು ರಾಜೀ ಸಂಧಾನದಕ್ಕೆ ಆಹ್ವಾನಿಸಲಾಗಿತ್ತು.

 ತಾಲ್ಲೂಕಿನ ಜೆ.ಎಂ.ಎಫ್‌.ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಹಾಗೂ ವಕೀಲರ ಜತೆ ಅದಾಲತ್‍ನಲ್ಲಿ ಭಾಗವಹಿಸಿ ಸಂಬಂಧಪಟ್ಟ ಪ್ರಕರಣಗಳನ್ನು ಇತ್ಯರ್ಥ ಪಡಿಸಿದರು. 7 ಸಿವಿಲ್ ಪ್ರಕರಣಗಳನ್ನು ಇತ್ಯರ್ಥ ಪಡಿಸಿದರು. ಒಟ್ಟು ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ   ಬ್ಯಾಂಕ್ ಹಾಗೂ ಇತರೆ ಸಂಘ, ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಹಣದ ರೂಪದಲ್ಲಿ ಇತ್ಯರ್ಥ ಪಡಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜಕರಾದ ಮಿನಾಕ್ಷಿ, ನಿರ್ಮಲ, ವಕೀಲರ ಸಂಘದ ಅಧ್ಯಕ್ಷ ಕೆ. ಜಗದಪ್ಪ,  ಕಾರ್ಯದರ್ಶಿ ಎಸ್.ಜಿ.ತಿಪ್ಪೇಸ್ವಾಮಿ, ಅಪರ ಸರ್ಕಾರಿ ವಕೀಲ ವಿ.ಜಿ. ಪ್ರಕಾಶ್ ಗೌಡ್ರು, ಹಿರಿಯ ವಕೀಲರಾದ ಪಿ. ಜಗದೀಶ್ ಗೌಡ, ಕೃಷ್ಣಮೂರ್ತಿ, ಗಂಗಾಧರ್ ಗುರುಮಠ್,  ಕಣವಿಹಳ್ಳಿ ಮಂಜುನಾಥ್, ಕೋಡಿಹಳ್ಳಿ ಪ್ರಕಾಶ್,  ಕೆ. ಬಸವರಾಜ್, ಕೆ.ಲಿಂಗಾನಂದ, ಬಿ.ಗೋಣಿಬಸಪ್ಪ, ಬಿ. ಹಾಲೇಶ್, ರುದ್ರಮನಿ, ಕೆ.ನಾಗರಾಜ್,  ಮಂಜ್ಯಾನಾಯ್ಕ, ಹೆಚ್. ನಾಗರಾಜ್, ಜೆ.ಸೀಮಾ, ಶಾಂತವೀರ ನಾಯ್ಕ, ಬಸವನಗೌಡ, ಟಿ.ಎಂ.ರಮೇಶ್, ಜಾಕೀರ್, ಬಸವರಾಜ್,  ಮಂಜುನಾಥ್, ಎ.ಮಲ್ಲಪ್ಪ ಮತ್ತು ಇತರರು ಇದ್ದರು.

error: Content is protected !!