ನಗರದ ಹಿರಿಯ ಪತ್ರಕರ್ತ ಬಾ.ಮ. ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಶಸ್ತಿ

ನಗರದ ಹಿರಿಯ ಪತ್ರಕರ್ತ ಬಾ.ಮ. ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಶಸ್ತಿ - Janathavaniದಾವಣಗೆರೆ,ಡಿ.26- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿ ವರ್ಷವೂ ಹಿರಿಯ ಮತ್ತು ಪ್ರತಿಭಾನ್ವಿತ ಪತ್ರಕರ್ತರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ನಗರದ ಹಿರಿಯ ಪತ್ರಕರ್ತರೂ, ಸಾಹಿತಿಗಳೂ ಆದ ಬಾ.ಮ. ಬಸವರಾಜಯ್ಯ ಭಾಜನರಾಗಿದ್ದಾರೆ.

ಶ್ರೀಮತಿ ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ರಾಜ್ಯ ಪ್ರಶಸ್ತಿಗೆ ಬಾ.ಮ. ಅವರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ, `ವಿಜಯ ಕರ್ನಾಟಕ’ದ ದಾವಣಗೆರೆ ಅವೃತ್ತಿಯಲ್ಲಿ ಡಿಸೈನರ್ ಎಸ್.ತಿಮ್ಮೇಶ್ ಅವರಿಗೂ ಪ್ರಶಸ್ತಿ ಲಭಿಸಿದೆ. 

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಶಿಫಾರಸ್ಸಿನಂತೆ ಈ ಪ್ರಶಸ್ತಿ ಘೋಷಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ  ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ತೊಗರಿ ಬೀಡು ಕಲಬುರಗಿಯಲ್ಲಿ ಬರುವ ಜನವರಿ 3 ಮತ್ತು 4 ರಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 36 ನೇ ರಾಜ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಪ್ರಶಸ್ತಿ ಪುರಸ್ಕೃತರಾದ ಬಾ.ಮ. ಮತ್ತು ತಿಮ್ಮೇಶ್ ಅವರುಗಳನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವೀರಪ್ಪ ಬಾವಿ, ಪ್ರಧಾನ ಕಾರ್ಯದರ್ಶಿ
ಇ.ಎಂ.ಮಂಜುನಾಥ, ಖಜಾಂಚಿ ಮಂಜಪ್ಪ ಮಾಗನೂರು, ಜಿಲ್ಲಾ ಉಪಾಧ್ಯಕ್ಷ ಹೆಚ್.ಎಂ.ಪಿ. ಕುಮಾರ್, ಸಂಘದ ರಾಜ್ಯ ಘಟಕದ ನಿರ್ದೇಶಕ ಕೆ. ಚಂದ್ರಣ್ಣ ಮತ್ತು ಇತರರು ಅಭಿನಂದಿಸಿದ್ದಾರೆ. ಹಿರಿಯ ಪತ್ರಕರ್ತರೂ ಆದ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಸವರಾಜ ಐರಣಿ, ಹಿರಿಯ ನ್ಯಾಯವಾದಿ ಎಲ್.ಹೆಚ್. ಅರುಣ್ ಕುಮಾರ್ ಅವರುಗಳು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿದ್ದಾರೆ.

error: Content is protected !!