ಸಂವಿಧಾನದ ಆಶಯದಡಿ ಕಾರ್ಯ ನಿರ್ವಹಿಸುವ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಿದೆ : ಎಸ್ಸೆಸ್

ದಾವಣಗೆರೆ, ಡಿ.26- ಭಾರತ ಸಂವಿಧಾನದ ಆಶಯ ಗಾಳಿಗೆ ತೂರಿ ಅಧಿಕಾರ ನಡೆಸುತ್ತಿರುವ ಬಿಜೆಪಿ ತೊಲಗಿಸಿ, ಕಾಂಗ್ರೆಸ್ ಪಕ್ಷವನ್ನು ದೇಶದಲ್ಲಿ ಆಡಳಿತಕ್ಕೆ ತರಲು ಸದಸ್ಯತ್ವ ನೋಂದಣಿ ಅಭಿಯಾನ ಮಹತ್ವದ ಕೆಲಸ ಮಾಡಲಿದೆ ಎಂದು ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಭಿಪ್ರಾಯ ಪಟ್ಟರು.

ಜಿಲ್ಲಾ ಮಹಿಳಾ ಕಾಂಗ್ರೆಸ್‍ ವತಿಯಿಂದ ಇಂದು ನಗರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸದಸ್ಯತ್ವ ನೋಂದಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲಾ ವರ್ಗಗಳ ಹಿತ ಬಯಸಿ ಆಡಳಿತ ನಡೆಸಿತು. ಆದರೆ, ಬಿಜೆಪಿಗರು ಸುಳ್ಳು ಹೇಳಿ ಅಧಿಕಾರ ಪಡೆದುಕೊಂಡರೂ ಸಹ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲತೆಯನ್ನು ಕಂಡಿದ್ದಾರೆ ಎಂದು ಅವರು ದೂರಿದರು.

ಜನ ವಿರೋಧಿ ನೀತಿ ಜಾರಿಗೆ ತರುತ್ತಿರುವ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬರಬೇಕಾದರೆ ಪಕ್ಷದ ಸದಸ್ಯತ್ವ ಪಡೆದವರು ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಮನೆ-ಮನೆಗೆ ತಲುಪಿಸಬೇಕು ಎಂದು ಕರೆ ನೀಡಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅನಿತಾಬಾಯಿ ಮಾಲತೇಶ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಜಿಲ್ಲಾ ವಕ್ತಾರರಾದ ನಾಗರತ್ನಮ್ಮ,  ಎಸ್.ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಕೊಡಪಾನ ದಾದಾಪೀರ್, ಮಹಿಳಾ ಕಾಂಗ್ರೆಸ್‍ನ ಶುಭಮಂಗಳ, ರಾಜೇಶ್ವರಿ, ನಾಗರತ್ನಮ್ಮ, ಆಶಾ ಮುರುಳಿ, ಮಂಗಳಮ್ಮ, ಗೀತಾ ಪ್ರಶಾಂತ್, ಗೀತಾ ಚಂದ್ರಶೇಖರ್, ದ್ರಾಕ್ಷಾಯಣಮ್ಮ, ಅನ್ನಪೂರ್ಣಮ್ಮ, ಸುನೀತಾ ಭೀಮಣ್ಣ, ರುದ್ರಮ್ಮ, ಸಲ್ಮಾ ಮತ್ತಿತರರಿದ್ದರು.

error: Content is protected !!